ಅಮರಾವತಿ: ಆಂಧ್ರಪ್ರದೇಶದ ಕೈಗಾರಿಕೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಮೇಕಪತಿ ಗೌತಮ ರೆಡ್ಡಿ (50) ಅವರು ಹೈದರಾಬಾದ್ನಲ್ಲಿ ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾದರು.
ಅವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ.ಗೌತಮ್ ರೆಡ್ಡಿ ಅವರು ಮಾಜಿ ಸಂಸದ ಮೇಕಪತಿ ರಾಜಮೋಹನ ರೆಡ್ಡಿ ಅವರ ಪುತ್ರ.
ರಾಜ್ಯದಲ್ಲಿ ಹೂಡಿಕೆಗಳನ್ನು ಮಾಡಲು ಬಂಡವಾಳಗಾರರನ್ನು ಓಲೈಸಲು ಆಂಧ್ರಪ್ರದೇಶ ಕೈಗಾರಿಕಾ ಸಚಿವಾಲಯದ ವತಿಯಿಂದ ದುಬೈನಲ್ಲಿ ಆಯೋಜಿಸಿದ್ದ ಎಕ್ಸ್ಪೋ ಕಾರ್ಯಕ್ರಮಕ್ಕಾಗಿ 10 ದಿನಗಳ ಕಾಲ ಅಲ್ಲಿದ್ದ ಗೌತಮ್ ರೆಡ್ಡಿ ಅವರು ಎರಡು ದಿನಗಳ ಹಿಂದೆಯಷ್ಟೇ ಹೈದರಾಬಾದ್ಗೆ ಮರಳಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.