ADVERTISEMENT

ಅರವಿಂದ ಲಿಂಬಾವಳಿಗೆ ತೆಲಂಗಾಣದ ಹೊಣೆ

17 ರಾಜ್ಯಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ

ಪಿಟಿಐ
Published 26 ಡಿಸೆಂಬರ್ 2018, 19:07 IST
Last Updated 26 ಡಿಸೆಂಬರ್ 2018, 19:07 IST
ಅರವಿಂದ ಲಿಂಬಾವಳಿ
ಅರವಿಂದ ಲಿಂಬಾವಳಿ   

ನವದೆಹಲಿ: ಲೋಕಸಭಾ ಚುನಾವಣೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಬುಧವಾರ 17 ರಾಜ್ಯಗಳಿಗೆ ಹೊಸದಾಗಿ ಉಸ್ತುವಾರಿಗಳನ್ನು ನೇಮಿಸಿದ್ದಾರೆ.

ಕರ್ನಾಟಕದ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರಿಗೆ ತೆಲಂಗಾಣದ ಉಸ್ತುವಾರಿ ವಹಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಕಟು ಟೀಕಾಕಾರರಾಗಿದ್ದ ಗುಜರಾತ್‌ನ ಪ್ರಭಾವಿ ನಾಯಕ ಗೋರ್ಧನ್‌ ಝಡಫಿಯಾ ಅವರಿಗೆ ರಾಷ್ಟ್ರೀಯ ರಾಜಕಾರಣದಲ್ಲಿ ಸ್ಥಾನ ನೀಡಲಾಗಿದ್ದು, ಉತ್ತರ ಪ್ರದೇಶದ ಉಸ್ತುವಾರಿ ನೀಡಿರುವುದು ಅಚ್ಚರಿ ಮೂಡಿಸಿದೆ. ಕೇಂದ್ರ ಸಚಿವರಾದ ಪ್ರಕಾಶ್‌ ಜಾವಡೇಕರ್‌ ಅವರನ್ನು ರಾಜಸ್ಥಾನಕ್ಕೆ ಮತ್ತು ಉತ್ತರಾಖಂಡಗೆ ತಾವರಚಂದ್‌ ಗೆಹ್ಲೊಟ್‌ ಅವರನ್ನು ನೇಮಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.