ADVERTISEMENT

ಇಡಿ, ಸಿಬಿಐ, ಐಟಿ ಅಧಿಕಾರಿಗಳು ಮೋದಿ ಜವಾನರೇ? ಖರ್ಗೆ ಕಿಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ನವೆಂಬರ್ 2023, 12:51 IST
Last Updated 6 ನವೆಂಬರ್ 2023, 12:51 IST
ನರೇಂದ್ರ ಮೋದಿ ಮತ್ತು ಮಲ್ಲಿಕಾರ್ಜುನ ಖರ್ಗೆ
ನರೇಂದ್ರ ಮೋದಿ ಮತ್ತು ಮಲ್ಲಿಕಾರ್ಜುನ ಖರ್ಗೆ    

ಜೋಧಪುರ (ರಾಜಸ್ಥಾನ) ‘ಪ್ರಧಾನಿ ನರೇಂದ್ರ ಮೋದಿ ಪ್ರಚಾರಕ್ಕೆ ಬರುವ ಮುನ್ನ ಇಡಿ, ಸಿಬಿಐ ಹಾಗೂ ಆದಾಯ ತೆರಿಗೆಯ ಅಧಿಕಾರಿಗಳನ್ನು ಮೊದಲು ಕಳುಹಿಸಿಕೊಡುತ್ತಾರೆ. ಹಾಗಾದರೆ ಸರ್ಕಾರಿ ಇಲಾಖೆಯ ಅಧಿಕಾರಿಗಳು ಮೋದಿಯ ಜವಾನರೇ‘ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ರಾಜಸ್ಥಾನ ಚುನಾವಣಾ ಪ್ರಚಾರದ ರ್‍ಯಾಲಿಯನ್ನು ಉದ್ದೇಶಿಸಿ ಜೋಧಪುರದಲ್ಲಿ ಮಾತನಾಡಿದ ಅವರು ಚುನಾವಣೆಯ ಸಂದರ್ಭಗಳಲ್ಲಿ ಕಾಂಗ್ರೆಸ್‌ ನಾಯಕರನ್ನು ಗುರಿಯಾಗಿಸಿಕೊಂಡು ದೇಶದ ವಿವಿಧ ಭಾಗಗಳಲ್ಲಿ ದಾಳಿಗಳು ನಡೆಸಲಾಗುತ್ತಿದೆ ಎಂದರು

‘ಚುನಾವಣೆಯ ಸಂದರ್ಭಗಳಲ್ಲಿ ಮಾತ್ರ ಮೋದಿ ಅವರಿಗೆ ಬಡವರು ನೆನಪಾಗುತ್ತಾರೆ. ಉಳಿದ ಸಮಯದಲ್ಲಿ ಉದ್ಯಮಿ ಆದಾನಿ ಬಗ್ಗೆ ಚಿಂತಿಸುತ್ತಾರೆ‘ ಎಂದು ಉಚಿತ ಪಡಿತರ ಅವಧಿಯನ್ನು ವಿಸ್ತರಿಸಿದ ಬಳಿಕ ಖರ್ಗೆ ವಾಗ್ದಾಳಿ ನಡೆಸಿದರು

ADVERTISEMENT

ರಾಜನಾದವನು ( ಮುಖ್ಯಮಂತ್ರಿ ಅಥವಾ ಪ್ರಧಾನಿ ಮಂತ್ರಿ) ಬಡವರಿಗೆ ಸಹಾಯ ಮಾಡುತ್ತಾನೆ. ಆದರೆ ಇವರ ( ಮೋದಿ) ಅಧಿಕಾರದ ಅವಧಿಯಲ್ಲಿ ಬಡವರು ಬಡವರಾಗಿಯೇ ಇದ್ದಾರೆ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಅಕೋಶ್‌ ಗೆಹಲೋತ್‌ ಇಂದು( ಸೋಮವಾರ) ನಾಮಪತ್ರ ಸಲ್ಲಿಸಿದ್ದಾರೆ.

ರಾಜಸ್ಥಾನ ವಿಧಾನಸಭೆಗೆ ನ.25ರಂದು ಚುನಾವಣೆ ನಡೆಯಲಿದ್ದು, ಡಿ.3ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.