ADVERTISEMENT

ಗುಂಡಿನ ದಾಳಿ: ಯೋಧ ಹುತಾತ್ಮ

ಪಿಟಿಐ
Published 1 ಅಕ್ಟೋಬರ್ 2020, 5:37 IST
Last Updated 1 ಅಕ್ಟೋಬರ್ 2020, 5:37 IST
ಪ್ರತಿ ದಾಳಿಗೆ  ಸಜ್ಜಾದ ಭಾರತದ ಯೋಧರು
ಪ್ರತಿ ದಾಳಿಗೆ  ಸಜ್ಜಾದ ಭಾರತದ ಯೋಧರು   

ಜಮ್ಮು: ಜಮ್ಮು– ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಸೇನಾಪಡೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಬುಧವಾರ ರಾತ್ರಿ ಮನ್‌ಕೋಟ್‌ ಮತ್ತು ಕೃಷ್ಣ ಘಾಟಿ ವಲಯದಲ್ಲಿ ಈ ದಾಳಿ ನಡೆದಿದೆ. ಪಾಕಿಸ್ತಾನ ಅಪ್ರಚೋದಿತವಾಗಿ ನಡೆಸಿದ ಗುಂಡಿನ ದಾಳಿಯಲ್ಲಿ ಭಾರತದ ಮತ್ತೊಬ್ಬ ಯೋಧರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಭಾರತದ ಸೇನಾಪಡೆ ಯೋಧರೂ ತಕ್ಕ ಪ್ರತ್ಯುತ್ತರ ನೀಡಿದರು. ಆದರೆ ಲ್ಯಾನ್ಸ್‌ ನಾಯಕ್‌ ಕರ್ನೈಲ್‌ ಸಿಂಗ್‌ ಹುತಾತ್ಮರಾದರು. ಗಾಯಗೊಂಡ ಮತ್ತೊಬ್ಬ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.