ಜಮ್ಮು: ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಶನಿವಾರ ಪಾಕಿಸ್ತಾನದ ಪಡೆಗಳು ಗುಂಡಿನ ದಾಳಿ ನಡೆಸಿದ ಕಾರಣ ಭಾರತದ ಯೋಧರೊಬ್ಬರು ಹುತಾತ್ಮನಾಗಿದ್ಧಾರೆ.
ಪಾಕಿಸ್ತಾನದ ಸೇನಾಪಡೆ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸುತ್ತಿದೆ. ಭಾರತದ ಯೋಧರೂ ಅವರ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ರಕ್ಷಣಾ ಪಡೆಯ ವಕ್ತಾರರು ತಿಳಿಸಿದ್ದಾರೆ.
ಶನಿವಾರದ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಹಿಮಾಚಲ ಪ್ರದೇಶದ ರೋಹಿನ್ಕುಮಾರ್ ನಂತರ ಹುತಾತ್ಮರಾದರು ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.