ADVERTISEMENT

ಕದನ ವಿರಾಮ ಉಲ್ಲಂಘಿಸಿದ ಪಾಕ್: ಭದ್ರತಾ ಪಡೆ ಅಧಿಕಾರಿ ಹುತಾತ್ಮ

ಏಜೆನ್ಸೀಸ್
Published 21 ಡಿಸೆಂಬರ್ 2018, 14:22 IST
Last Updated 21 ಡಿಸೆಂಬರ್ 2018, 14:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಮ್ಮು ಕಾಶ್ಮೀರ: ಇಲ್ಲಿನ ಕುಪ್ವಾರ ಜಿಲ್ಲೆಯಲ್ಲಿಪಾಕಿಸ್ತಾನದ ಭದ್ರತಾ ಪಡೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ.

ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯಭದ್ರತಾ ಪಡೆಯ ಒಬ್ಬಅಧಿಕಾರಿ ಹುತಾತ್ಮರಾಗಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ.

ಪಾಕ್‌ ಪಡೆ ಪಾಕಿಸ್ತಾನದ ಕೆರನ್ ವಲಯದಲ್ಲಿ ಶುಕ್ರವಾರ ಸುಮಾರು ಮಧ್ಯಾಹ್ನ12ರ ವೇಳೆಗೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿತು. ಇದಕ್ಕೆ ಭದ್ರತಾ ಪಡೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.