ADVERTISEMENT

ಜಮ್ಮು: ಎಲ್‌ಒಸಿ ಬಳಿ ಒಳನುಸುಳುಕೋರನ ಹತ್ಯೆ

ಪಿಟಿಐ
Published 10 ಫೆಬ್ರುವರಿ 2021, 10:21 IST
Last Updated 10 ಫೆಬ್ರುವರಿ 2021, 10:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳುಕೋರನೊಬ್ಬನನ್ನು ಸೇನೆಯು ಹೊಡೆದುರುಳಿಸಿದೆ’ ಎಂದು ಪೊಲೀಸರು ಬುಧವಾರ ತಿಳಿಸಿದರು.

ಮಂಗಳವಾರ ರಾತ್ರಿ ಉರಿ ಸೆಕ್ಟರ್‌ನ ದುಲಂಜಾ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳುಕೋರನನ್ನು ಹತ್ಯೆಗೈಯಲಾಗಿದೆ. ಈತನನ್ನು ಉರಿಯ ಕುಂಡಿಬಾರ್ಜಲಾ ಕಮಲಕೋಟೆ ನಿವಾಸಿ ಸರ್ಫಾಸ್‌ ಮಿರ್‌ ಎಂದು ಗುರುತಿಸಲಾಗಿದೆ.

‘ಘಟನಾ ಸ್ಥಳದಿಂದ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಸೇರಿದ ಗುರುತಿನ ಚೀಟಿ ಮತ್ತು ರೈಫಲ್‌ ಅನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.