ಶ್ರೀನಗರ: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಭಾರತೀಯ ಸೇನೆಯ ಯೋಧರೊಬ್ಬರ ಬ್ಯಾಗ್ನಲ್ಲಿ ಜೀವಂತ ಹ್ಯಾಂಡ್ ಗ್ರೆನೆಡ್ ಪತ್ತೆಯಾಗಿದ್ದು, ಯೋಧನನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ವೆಲ್ಲೂರು ಮೂಲದ ಬಾಲಾಜಿ ಸಂಪತ್ ಬಂಧಿತ ಯೋಧ. ನಿಲ್ದಾಣದಲ್ಲಿ ಬ್ಯಾಗ್ಗಳನ್ನು ತಪಾಸಣೆ ಮಾಡುವಾಗ ಜೀವಂತ ಹ್ಯಾಂಡ್ ಗ್ರೆನೆಡ್ ಪತ್ತೆಯಾಗಿದೆ. ಬಂಧಿತ ಯೋಧ ಇಂಡಿಗೋ ವಿಮಾನದಲ್ಲಿ ಶ್ರೀನಗರದಿಂದ ದೆಹಲಿ ಮೂಲಕ ಚೆನ್ನೈಗೆ ತೆರಳಬೇಕಿತ್ತು. ಹೆಚ್ಚಿನ ವಿಚಾರಣೆಗಾಗಿ ಆರೋಪಿ ಯೋಧನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.