ರಾಮ್ಬನ್ ಜಿಲ್ಲೆಯ ಕಡಿದಾದ ಪ್ರದೇಶದ ಒಂದು ನೋಟ
(ಪಿಟಿಐ ಸಂಗ್ರಹ ಚಿತ್ರ)
ರಾಮಬನ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಮಬನ ಜಿಲ್ಲೆಯಲ್ಲಿ ಭಾನುವಾರ ಸೇನಾ ವಾಹನವೊಂದು ರಸ್ತೆಯಿಂದ ಜಾರಿ 700 ಅಡಿ ಆಳದ ಕಂದಕಕ್ಕೆ ಉರುಳಿ, ಮೂವರು ಸೈನಿಕರು ಮೃತಪಟ್ಟಿದ್ದಾರೆ.
ಬೆಳ್ಳಿಗೆ 11.30ರ ಸುಮಾರಿಗೆ ಬೈಟರಿ ಚಶ್ಮಾ ಬಳಿ ಅಪಘಾತ ಸಂಭವಿಸಿದೆ. ಸೇನಾ ವಾಹನವು ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿತ್ತು.
ಸೇನೆ, ಪೊಲೀಸರು, ಎಸ್ಡಿಆರ್ಎಫ್, ಸ್ಥಳೀಯ ಸ್ವಯಂಸೇವಕರು ಮತ್ತು ಮೂವರು ಸೈನಿಕರಿಂದ ತಕ್ಷಣವೇ ಜಂಟಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸೈನಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ಸಿಪಾಯಿ ಅಮಿತ್ ಕುಮಾರ್, ಸುಜಿತ್ ಕುಮಾರ್ ಮತ್ತು ಮಾನ್ ಬಹುದ್ದೂರ್ ಗುರುತಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.