ADVERTISEMENT

ಶಿಕ್ಷಕರ ನೇಮಕಾತಿ ಹಗರಣ: ಬಂಗಾಳದ ಬಂಧಿತ ಸಚಿವ ಭುವನೇಶ್ವರದ ಏಮ್ಸ್‌ಗೆ ದಾಖಲು

​ಪ್ರಜಾವಾಣಿ ವಾರ್ತೆ
Published 25 ಜುಲೈ 2022, 11:15 IST
Last Updated 25 ಜುಲೈ 2022, 11:15 IST
ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರನ್ನು ಕೋಲ್ಕತ್ತದ ಎಸ್‌ಎಎಸ್‌ಕೆಎಂ ಆಸ್ಪತ್ರೆಯಿಂದ ಭುವನೇಶ್ವರಕ್ಕೆ ಏರ್ ಅಂಬುಲೆನ್ಸ್ ಮೂಲಕ ಸ್ಥಳಾಂತರಿಸಲು ಸೋಮವಾರ ಗ್ರೀನ್‌ ಕಾರಿಡಾರ್‌ನಲ್ಲಿ ಕರೆದೊಯ್ಯಲು ಆಂಬುಲೆನ್ಸ್‌ಗೆ ಹತ್ತಿಸಲಾಯಿತು  – ಪಿಟಿಐ ಚಿತ್ರ
ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರನ್ನು ಕೋಲ್ಕತ್ತದ ಎಸ್‌ಎಎಸ್‌ಕೆಎಂ ಆಸ್ಪತ್ರೆಯಿಂದ ಭುವನೇಶ್ವರಕ್ಕೆ ಏರ್ ಅಂಬುಲೆನ್ಸ್ ಮೂಲಕ ಸ್ಥಳಾಂತರಿಸಲು ಸೋಮವಾರ ಗ್ರೀನ್‌ ಕಾರಿಡಾರ್‌ನಲ್ಲಿ ಕರೆದೊಯ್ಯಲು ಆಂಬುಲೆನ್ಸ್‌ಗೆ ಹತ್ತಿಸಲಾಯಿತು  – ಪಿಟಿಐ ಚಿತ್ರ   

ಭುವನೇಶ್ವರ/ಕೋಲ್ಕತ್ತ:ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆಸಂಬಂಧಿಸಿ ಬಂಧನದಲ್ಲಿರುವ ಕೈಗಾರಿಕೆ ಹಾಗೂ ವಾಣಿಜ್ಯ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಬೆಳಿಗ್ಗೆ ವೈದ್ಯಕೀಯ ಪರೀಕ್ಷೆಗಾಗಿ ಭುವನೇಶ್ವರಕ್ಕೆ ಕರೆದೊಯ್ದಿದ್ದು, ಏಮ್ಸ್‌ಗೆ ದಾಖಲಿಸಿದೆ.

ಕಲ್ಕತ್ತ ಹೈಕೋರ್ಟ್‌ ನಿರ್ದೇಶನದ ಮೇರೆಗೆಇ.ಡಿ ಅಧಿಕಾರಿಗಳು ಪಾರ್ಥ ಚಟರ್ಜಿ ಅವರನ್ನು ಬೆಳಿಗ್ಗೆ 9ರ ಸುಮಾರಿಗೆ ಕೋಲ್ಕತ್ತ ವಿಮಾನ ನಿಲ್ದಾಣದಿಂದ ಭುವನೇಶ್ವರಕ್ಕೆ ಏರ್ ಆಂಬುಲೆನ್ಸ್ ಮೂಲಕ ಕರೆದೊಯ್ದರು.

ಸಚಿವರು ಭುವನೇಶ್ವರಕ್ಕೆ ಬಂದಿಳಿದ ನಂತರ ಏಮ್ಸ್‌ ಆಸ್ಪತ್ರೆಯ ಖಾಸಗಿ ವಾರ್ಡ್‌ನಲ್ಲಿದಾಖಲಾದರು. ಅವರ ಆರೋಗ್ಯ ಪರೀಕ್ಷಿಸಿದ ಮೇಲೆ ವಿಶೇಷ ಕೊಠಡಿಗೆ ಸ್ಥಳಾಂತರಿಸಲಾಯಿತು ಎಂದುವೈದ್ಯಕೀಯ ಘಟಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಇದಕ್ಕೂ ಮೊದಲು ಸಚಿವರನ್ನು ಎಸ್‌ಎಸ್‌ಕೆಎಂ ಸರ್ಕಾರಿ ಆಸ್ಪತ್ರೆಯಿಂದ ಆಂಬುಲೆನ್ಸ್‌ನಲ್ಲಿ ಗ್ರೀನ್‌ ಕಾರಿಡಾರ್‌ ಮೂಲಕ ಕೋಲ್ಕತ್ತ ವಿಮಾನ ನಿಲ್ದಾಣಕ್ಕೆ 30 ನಿಮಿಷಗಳ ಅವಧಿಯಲ್ಲಿ ಕರೆದೊಯ್ಯಲಾಯಿತು.

ಕೋಲ್ಕತ್ತದ ಅಧೀನ ನ್ಯಾಯಾಲಯ ಸಚಿವರನ್ನುಸೋಮವಾರದವರೆಗೆ ಇ.ಡಿ ವಶಕ್ಕೆ ಒಪ್ಪಿಸಿತ್ತು.ಪಾರ್ಥ ಚಟರ್ಜಿ ಅವರು ಶಿಕ್ಷಣ ಸಚಿವರಾಗಿದ್ದಾಗ ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿ ಹಗರಣ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.