ADVERTISEMENT

ಅರುಣ್‌ ಜೇಟ್ಲಿ ನಿಧನ: ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಂತಿಮ ದರ್ಶನ

ಪಿಟಿಐ
Published 25 ಆಗಸ್ಟ್ 2019, 5:30 IST
Last Updated 25 ಆಗಸ್ಟ್ 2019, 5:30 IST
   

ನವದೆಹಲಿ:ತೀವ್ರ ಅನಾರೋಗ್ಯದಿಂದ ದೆಹಲಿಯ ಏಮ್ಸ್‌ನಲ್ಲಿ ನಿಧನರಾದ ಬಿಜೆಪಿ ನಾಯಕ ಅರುಣ್ ಜೇಟ್ಲಿ ಅವರ ಪಾರ್ಥೀವ ಶರೀರವನ್ನು ದೆಹಲಿಯ ಬಿಜೆಪಿ ಕಚೇರಿಗೆ ತರಲಾಗಿದ್ದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಶನಿವಾರ ಮಧ್ಯಾಹ್ನವೇ ಅವರ ದೇಹವನ್ನು ದೆಹಲಿಯ ಅವರ ನಿವಾಸಕ್ಕೆ ತರಲಾಗಿತ್ತು, ಅಲ್ಲಿ ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಸೇರಿದಂತೆ ಬಿಜೆಪಿಯ ಹಲವು ನಾಯಕರು, ಕಾಂಗ್ರೆಸ್‌ ವರಿಷ್ಠೆ ಸೋನಿಯಾಗಾಂಧಿ, ರಾಹುಲ್‌ ಗಾಂಧಿ, ಮೋತಿಲಾಲ್‌ ವೋರಾ, ಎನ್‌ಸಿಪಿ ನಾಯಕ ಶರದ್ ಪವಾರ್‌, ಪ್ರಫುಲ್‌ ಪಟೇಲ್‌, ಆರ್‌ಎಲ್‌ಡಿ ನಾಯಕ ಅಜಿತ್‌ ಸಿಂಗ್‌, ಟಿಡಿಪಿ ನಾಯಕ ಎನ್‌.ಚಂದ್ರಬಾಬು ನಾಯ್ಡು ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಜೇಟ್ಲಿ ಅವರ ಅಂತಿಮ ದರ್ಶನ ಪಡೆದರು.

ADVERTISEMENT

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅರುಣ್‌ ಜೇಟ್ಲಿ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದ್ದು ಪಕ್ಷದ ಕಾರ್ಯಕರ್ತರ ಹಾಗೂ ಸಂಘ ಪರಿವಾರದ ಮುಖಂಡರು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಮಧ್ಯಾಹ್ನ 1.30ರ ವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಯಮುನಾ ನದಿಯ ದಡದಲ್ಲಿರುವ ನಿಗಂಬೋದ್‌ ಘಾಟ್‌ಗೆಜೇಟ್ಲಿ ಅವರ ದೇಹವನ್ನುಮೆರವಣಿಗೆಯ ಮೂಲಕ ತರಲಾಗುವುದು.

2.30ರ ಸುಮಾರಿಗೆ ಧಾರ್ಮಿಕ ವಿಧಿ ವಿಧಾನಗಳ ಮೂಲಕಅಂತಿಮ ಸಂಸ್ಕಾರನಡೆಸಲಾಗುವುದು ಎಂದು ಅರುಣ್‌ ಜೇಟ್ಲಿ ಅವರ ಕುಟುಂಬ ಮೂಲಗಳು ತಿಳಿಸಿವೆ.

ಬಿಜೆಪಿಕೇಂದ್ರ ಕಚೇರಿಯ ಸುತ್ತಮುತ್ತ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ. ಅಂತಿಮ ಯಾತ್ರೆಯ ಮೆರವಣಿಗೆ ಸಾಗುವ ರಸ್ತೆಗಳಲ್ಲೂ ಪೊಲೀಸ್‌ ಭದ್ರತೆ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿದ್ದ ಅರುಣ್‌ ಜೇಟ್ಲಿ ಹಣಕಾಸು, ಕಾನೂನು ಮತ್ತು ಸಂಸದೀಯ, ಕೈಗಾರಿಕೆ ಮತ್ತು ವಾಣಿಜ್ಯ, ರಕ್ಷಣ ಸಚಿವರಾಗಿ ಕೆಲಸ ಮಾಡಿದ್ದರು. ಮೃತರು ಪತ್ನಿ ಸಂಗೀತಾ, ಮಗಳು ಸೋನಾಲಿ, ಪುತ್ರ ರೋಹನ್ ಅವರನ್ನು ಅಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.