ನವದೆಹಲಿ: ಒಂದು ತಿಂಗಳ ನಂತರ ಅರುಣ್ ಜೇಟ್ಲಿ ಅವರು ಹಣಕಾಸು ಸಚಿವರಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ಅವರು ಕಳೆದ ವಾರ ಮರಳಿದ್ದರು. ಅವರ ಅನುಪಸ್ಥಿತಿಯಲ್ಲಿ ರೈಲ್ವೆ ಸಚಿವ ಪೀಯೂಷ್ ಗೋಯಲ್ ಹಂಗಾಮಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
’ಹಣಕಾಸು ಸಚಿವಾಲಯದಲ್ಲಿ ಇಂದು ನನ್ನ ಕರ್ತವ್ಯಕ್ಕೆ ಹಾಜರಾಗಿದ್ದೇನೆ. ಸಚಿವಾಲಯದಲ್ಲಿ ಸಮರ್ಥವಾಗಿ ಹಾಗೂ ಶ್ರದ್ಧೆಯಿಂದ ಕಾರ್ಯ ನಿರ್ವಹಿಸಿದ ಶ್ರೀ ಪೀಯೂಷ್ ಗೋಯಲ್ ಅವರಿಗೆ ಧನ್ಯವಾದ‘ ಎಂದು ಜೇಟ್ಲಿ ಟ್ವೀಟ್ ಮಾಡಿದ್ದಾರೆ.
ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ ನಡೆದ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮೊದಲು ಪಾಲ್ಗೊಂಡ ಅವರು ನಂತರ ಹಣಕಾಸು ಸಚಿವಾಲಯಕ್ಕೆ ತೆರಳಿ, ಅಧಿಕಾರ ಸ್ವೀಕರಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.