ADVERTISEMENT

ಭಗತ್‌, ಅಂಬೇಡ್ಕರ್‌ ಫೋಟೊಗಳನ್ನು ಕಚೇರಿಗಳಲ್ಲಿ ಅಳವಡಿಸಿ: ಬಿಜೆಪಿಗೆ ಕೇಜ್ರಿವಾಲ್‌

ಪಿಟಿಐ
Published 23 ಮಾರ್ಚ್ 2022, 16:29 IST
Last Updated 23 ಮಾರ್ಚ್ 2022, 16:29 IST
ಸಾಂದರ್ಭಿಕ ಚಿತ್ರ (ಪಿಟಿಐ)
ಸಾಂದರ್ಭಿಕ ಚಿತ್ರ (ಪಿಟಿಐ)   

ನವದೆಹಲಿ: ''ಪಂಜಾಬ್‌ ಮತ್ತು ದೆಹಲಿಯ ವಿಧಾನಸಭೆಯಲ್ಲಿ ರಾಜಕಾರಣಿಗಳ ಬದಲಾಗಿ ಕೇವಲ ಡಾ. ಬಿ.ಆರ್‌. ಅಂಬೇಡ್ಕರ್‌ ಮತ್ತು ಭಗತ್‌ ಸಿಂಗ್‌ ಅವರ ಭಾವಚಿತ್ರಗಳನ್ನು ಅಳವಡಿಸಲು ಎಎಪಿ ಸರ್ಕಾರಗಳು ನಿರ್ಧರಿಸಿವೆ'' ಎಂದು ಆಮ್‌ ಆದ್ಮಿ ಪಕ್ಷದ ಮುಖಂಡ, ದೆಹಲಿ ಸಿಎಂ ಆರವಿಂದ ಕೇಜ್ರಿವಾಲ್‌ ಹೇಳಿದರು.

ದೆಹಲಿ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಕೇಜ್ರಿವಾಲ್‌, ಬಿಜೆಪಿ ಸರ್ಕಾರಗಳಿಗೆ ತಮ್ಮ ಕಚೇರಿಗಳಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ಮತ್ತು ಶಹೀದ್‌ ಭಗತ್‌ ಸಿಂಗ್‌ ಅವರ ಭಾವಚಿತ್ರಗಳನ್ನು ಅಳವಡಿಸಿಕೊಳ್ಳುವಂತೆ ಮನವಿ ಮಾಡಿದರು.

''ಭ್ರಷ್ಟಾಚಾರ ಮತ್ತು ತಾರತಮ್ಯದಂತಹ ಕೊಳಕು ರಾಜಕಾರಣವನ್ನು ಎಎಪಿ ಸರ್ಕಾರವು ತೊಲಗಿಸಿದೆ. ಶಿಕ್ಷಣ, ಆರೋಗ್ಯ, ವಿದ್ಯುತ್‌, ನೀರು ಮತ್ತು ರಸ್ತೆಗಳ ಅಭಿವೃದ್ಧಿಯ ಮೂಲಕ ಪ್ರಾಮಾಣಿಕ ಮಾದರಿಯ ರಾಜಕಾರಣವನ್ನು ಪರಿಚಯಿಸಿದೆ'' ಎಂದು ಕೇಜ್ರಿವಾಲ್‌ ಹೇಳಿದರು.

ADVERTISEMENT

ಭಗತ್‌ ಸಿಂಗ್‌ ಅವರಿಗೆ ಗೌರವ ಸಮರ್ಪಣೆಯ ಭಾಗವಾಗಿ ಪಂಜಾಬ್‌ ಸಿಎಂ ಭಗವಂತ ಮಾನ್‌ ಮತ್ತು ಅವರ ಸಂಪುಟ ಸದಸ್ಯರು ಭಗತ್‌ ಸಿಂಗ್‌ ಅವರ ಜನ್ಮಸ್ಥಳ ಖಾಟ್ಕರ್‌ ಕಲಾನ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.