ADVERTISEMENT

ಕೋವಿಡ್‌–19: ತುರ್ತು ಸಭೆ ಕರೆದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌

ಪಿಟಿಐ
Published 26 ಆಗಸ್ಟ್ 2020, 4:25 IST
Last Updated 26 ಆಗಸ್ಟ್ 2020, 4:25 IST
ಅರವಿಂದ್‌ ಕೇಜ್ರಿವಾಲ್
ಅರವಿಂದ್‌ ಕೇಜ್ರಿವಾಲ್   

ನವದೆಹಲಿ: ದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಸೋಂಕು‌ ಪ್ರಕರಣಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು‌ ಬುಧವಾರ ಉನ್ನತ ಮಟ್ಟದ ಸಭೆ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್, ಮುಖ್ಯ ಕಾರ್ಯದರ್ಶಿ ವಿಜಯ್‌ ದೇವ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ನಗರದಲ್ಲಿ ಮಂಗಳವಾರ 1,544 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 17 ಮಂದಿ ಸಾವಿಗೀಡಾಗಿದ್ದಾರೆ. ಇದು ಕಳೆದ ಒಂದು ತಿಂಗಳಲ್ಲಿ ಮೊದಲ ಬಾರಿಗೆ ಹೊಸ ಪ್ರಕರಣಗಳ ಸಂಖ್ಯೆ 1,500 ಗಡಿ ದಾಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.