ADVERTISEMENT

ದೆಹಲಿಯಲ್ಲಿ ಅತ್ಯಾಚಾರ, ಕೊಲೆ ಪ್ರಕರಣ: ಕೇಜ್ರಿವಾಲ್‌ ಖಂಡನೆ

ಪಿಟಿಐ
Published 3 ಆಗಸ್ಟ್ 2021, 15:11 IST
Last Updated 3 ಆಗಸ್ಟ್ 2021, 15:11 IST
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್   

ನವದೆಹಲಿ: ರಾಜಧಾನಿಯಲ್ಲಿ ಒಂಬತ್ತು ವರ್ಷದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣವನ್ನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಖಂಡಿಸಿದ್ದು, ತಪ್ಪಿತಸ್ಥರಿಗೆ ಕಠಿಣಸಜೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಸುಧಾರಿಸುವ ಅಗತ್ಯವಾಗಿದೆ.ಮೃತಳ ಕುಟುಂಬ ಸದಸ್ಯರನ್ನು ಬುಧವಾರ ಭೇಟಿ ಮಾಡಲಿದ್ದು, ಕಾನೂನು ಹೋರಾಟಕ್ಕೆ ಅಗತ್ಯವಿರುವ ಎಲ್ಲ ನೆರವು ನೀಡಲಾಗುವುದು ಎಂದು ಅವರು ಅಭಿಪ್ರಾಯಪಟ್ಟರು.

ಪೊಲೀಸರ ಪ್ರಕಾರ, ಶಂಕಾಸ್ಪದ ರೀತಿಯಲ್ಲಿ ದಲಿತ ಬಾಲಕಿ ಸತ್ತಿದ್ದು, ಅಂತ್ಯಕ್ರಿಯೆಯನ್ನು ಒತ್ತಾಯದಿಂದ ನಡೆಸಲಾಗಿದೆ. ಬಾಲಕಿ ತಾಯಿಯ ಹೇಳಿಕೆಯನ್ನು ಆಧರಿಸಿ ಎಫ್‌ಐಆರ್‌ನಲ್ಲಿ ಅತ್ಯಾಚಾರ ಆರೋಪವನ್ನು ಸೇರಿಸಲಾಗಿದೆ. ಕೃತ್ಯಕ್ಕೆ ಸಂಬಂಧಿಸಿ ಶವಸಂಸ್ಕಾರ ನಡೆಸಿದ ವ್ಯಕ್ತಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.