ADVERTISEMENT

ಚರ್ಚೆಗಾಗಿ ರೈತ ಮುಖಂಡರನ್ನು ದೆಹಲಿ ವಿಧಾನಸಭೆಗೆ ಆಹ್ವಾನಿಸಿದ ಕೇಜ್ರಿವಾಲ್

ಏಜೆನ್ಸೀಸ್
Published 20 ಫೆಬ್ರುವರಿ 2021, 13:50 IST
Last Updated 20 ಫೆಬ್ರುವರಿ 2021, 13:50 IST
ಅರವಿಂದ್ ಕೇಜ್ರಿವಾಲ್‌
ಅರವಿಂದ್ ಕೇಜ್ರಿವಾಲ್‌   

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಭಾನುವಾರ ಭೇಟಿಯಾಗಲಿದ್ದಾರೆ.

ದೆಹಲಿ ವಿಧಾನಸಭೆಗೆ ರೈತ ಮುಖಂಡರನ್ನು ಆಹ್ವಾನಿಸಿರುವ ಕೇಜ್ರಿವಾಲ್‌ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಈ ಬಗ್ಗೆ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಆಮ್‌ ಆದ್ಮಿ ಪಕ್ಷವು, 'ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ನಾಳೆ(ಭಾನುವಾರ) ದೆಹಲಿ ವಿಧಾನಸಭೆಯಲ್ಲಿ ಸಂವಾದ ನಡೆಸಲು ರೈತ ಮುಖಂಡರನ್ನು ಆಹ್ವಾನಿಸಿದ್ದಾರೆ. ಎಎಪಿ ರೈತರ ಪರವಾಗಿದೆ' ಎಂದು ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.