ADVERTISEMENT

‘ಓಮಿಕ್ರಾನ್‌’ ಸೋಂಕು ಪ್ರಕರಣ: ವಿಮಾನ ಸಂಚಾರ ಸ್ಥಗಿತಕ್ಕೆ ಕೇಜ್ರಿವಾಲ್‌ ಒತ್ತಾಯ

ಪಿಟಿಐ
Published 27 ನವೆಂಬರ್ 2021, 12:32 IST
Last Updated 27 ನವೆಂಬರ್ 2021, 12:32 IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (ಪಿಟಿಐ ಚಿತ್ರ)
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (ಪಿಟಿಐ ಚಿತ್ರ)   

ನವದೆಹಲಿ: ಕೊರೊನಾ ವೈರಸ್‌ನ ಹೊಸ ರೂಪಾಂತರಿ ತಳಿ ‘ಓಮಿಕ್ರಾನ್‌’ ಸೋಂಕು ಪ್ರಕರಣಗಳು ವರದಿಯಾಗಿರುವ ದೇಶಗಳಿಂದ ಭಾರತಕ್ಕೆ ವಿಮಾನ ಸಂಚಾರ ಸ್ಥಗಿತಗೊಳಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಕೋವಿಡ್‌–19 ಪಿಡುಗಿನಿಂದ ದೇಶ ಬಹಳ ಕಷ್ಟದಿಂದ ಚೇತರಿಸಿಕೊಂಡಿದೆ. ಹೀಗಾಗಿ ಈಗ ವೈರಸ್‌ನ ಹೊಸ ತಳಿ ಸೋಂಕು ಪ್ರಸರಣವಾಗದಂತೆ ತಡೆಯಲು ಸಾಧ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT