ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಇಂದು(ಬುಧವಾರ) ಪುನರಾರಂಭಿಸಲಿದೆ.
ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅ. 2ರಂದು ಆರ್ಯನ್ ಖಾನ್ರನ್ನು ಎನ್ಸಿಬಿ ವಶಕ್ಕೆ ಪಡೆದಿತ್ತು. ಸದ್ಯ ಆರ್ಯನ್ ಖಾನ್ ಅವರು ಜೈಲುವಾಸದಲ್ಲಿ ಇದ್ದಾರೆ.
ಇದೇ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದ ಮನೀಶ್ ರಾಜಗರಿಯಾ ಮತ್ತು ಅವಿನ್ ಸಾಹು ಅವರಿಗೆ ವಿಶೇಷ ನ್ಯಾಯಾಲಯವು ನಿನ್ನೆ (ಮಂಗಳವಾರ) ಜಾಮೀನು ನೀಡಿತ್ತು.
ವಿಶೇಷ ನ್ಯಾಯಾಲಯದಲ್ಲಿ ಜಾಮೀನು ದೊರೆಯದ ಹಿನ್ನೆಲೆಯಲ್ಲಿ ಆರ್ಯನ್ ಖಾನ್ ಅವರು ಬಾಂಬೆ ಹೈಕೋರ್ಟ್ ಮೊರೆಹೋಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.