ADVERTISEMENT

ಸುಪ್ರೀಂ ತೀರ್ಪಿನಿಂದ ಸಂತಸ: ನಿರ್ಭಯಾ ತಾಯಿ ಆಶಾ ದೇವಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 11:04 IST
Last Updated 18 ಡಿಸೆಂಬರ್ 2019, 11:04 IST
   

ನವದೆಹಲಿ:ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ಅಪರಾಧಿ ಅಕ್ಷಯ್‌ ಕುಮಾರ್ ಸಿಂಗ್‌ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿರುವುದರಿಂದ ನನಗೆ ಸಂತೋಷವಾಗಿದೆ ಎಂದು ನಿರ್ಭಯಾ ತಾಯಿ ತಿಳಿಸಿದ್ದಾರೆ.

ನ್ಯಾಯಮೂರ್ತಿ ಆರ್.ಭಾನುಮತಿ, ಅಶೋಕ್ ಭೂಷಣ್ ಮತ್ತು ಎಸ್.ಎ.ಬೋಪಣ್ಣ ಒಳಗೊಂಡ ನ್ಯಾಯಪೀಠ ಮರುಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ್ದು, ಅಪರಾಧಿಯ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿತು.

ADVERTISEMENT

ತೀರ್ಪಿನ ಬಳಿಕನಿರ್ಭಯಾ ತಾಯಿ ಆಶಾ ದೇವಿಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಪ್ರತಿಕ್ರಿಯೆಯಲ್ಲಿ 'ಸುಪ್ರೀಂ ಕೋರ್ಟ್ಮರುಪರಿಶೀಲನಾ ಅರ್ಜಿ ತಿರಸ್ಕರಿಸಿರುವುದು ನನಗೆಸಂತಸ ತಂದಿದೆ' ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.