ADVERTISEMENT

ಕೊನೆ ಇಲ್ಲದ ಹೋಟೆಲ್‌ ವಾಸ್ತವ್ಯ: ಗೆಹ್ಲೋಟ್‌ ನಿಷ್ಠರು ಜೈಸಲ್ಮೇರ್‌ಗೆ ಸ್ಥಳಾಂತರ?

ಆ. 14ರಂದು ಅಧಿವೇಶನ * ಮತ್ತೆ ಚುರುಕುಗೊಂಡ ರಾಜಕೀಯ ಚಟುವಟಿಕೆ

ಪಿಟಿಐ
Published 31 ಜುಲೈ 2020, 5:59 IST
Last Updated 31 ಜುಲೈ 2020, 5:59 IST
ಜೈಪುರದ ಹೋಟೆಲ್‌ನಲ್ಲಿ ನಡೆದ್ ಸಭೆಯಲ್ಲಿ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್‌ ಬೆಂಬಲಿಗ ಶಾಸಕರು ಪಾಲ್ಗೊಂಡಿದ್ದರು  (ಸಂಗ್ರಹ ಚಿತ್ರ) – ಪಿಟಿಐ ಚಿತ್ರ
ಜೈಪುರದ ಹೋಟೆಲ್‌ನಲ್ಲಿ ನಡೆದ್ ಸಭೆಯಲ್ಲಿ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್‌ ಬೆಂಬಲಿಗ ಶಾಸಕರು ಪಾಲ್ಗೊಂಡಿದ್ದರು  (ಸಂಗ್ರಹ ಚಿತ್ರ) – ಪಿಟಿಐ ಚಿತ್ರ   

ಜೈಪುರ:ವಿಧಾನಸಭೆ ಅಧಿವೇಶನ ನಡೆಸಲು ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ ಅನುಮತಿ ನೀಡಿರುವ ಬೆನ್ನಲ್ಲೇ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಚುರುಕುಗೊಂಡಿವೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಅವರ ನಿಷ್ಠ ಶಾಸಕರನ್ನು ಜೈಪುರ ಹೋಟೆಲ್‌ನಿಂದ ಜೈಸಲ್ಮೇರ್‌ನಲ್ಲಿರುವ ಹೋಟೆಲ್‌ಗೆ ಶುಕ್ರವಾರ ಸ್ಥಳಾಂತರಿಸಲು ಮುಖಂಡರು ಮುಂದಾಗಿದ್ದಾರೆ. ಆದರೆ, ಶಾಸಕರನ್ನು ಸ್ಥಳಾಂತರಿಲು ಕಾರಣ ಏನು ಎಂಬುದನ್ನು ಮೂಲಗಳು ಸ್ಪಷ್ಟಪಡಿಸಿಲ್ಲ.

ಶಾಸಕರನ್ನು ಸದ್ಯ ಜೈಪುರ–ದೆಹಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಐಷಾರಾಮಿ ಹೋಟೆಲ್‌ನಲ್ಲಿ ಇರಿಸಲಾಗಿದೆ. ಅಲ್ಲಿಯೇ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಗೆಹ್ಲೋಟ್‌ ಅವರು ಶಾಸಕರನ್ನು ಉದ್ದೇಶಿಸಿ ಮಾತನಾಡುವರು. ನಂತರ ಎಲ್ಲರನ್ನು ಜೈಸಲ್ಮೇರ್‌ನ ಹೋಟೆಲ್‌ಗೆ ಸ್ಥಳಾಂತರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಸಚಿನ್‌ ಪೈಲಟ್‌ ಹಾಗೂ 18 ಜನ ಶಾಸಕರು ಬಂಡಾಯದ ಬಾವುಟ ಹಾರಿಸಿದ ನಂತರ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಯಿತು. ಹೀಗಾಗಿ ಜುಲೈ 13ರಂದು ಶಾಸಕರು ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.