ADVERTISEMENT

ಜ್ಞಾನವ್ಯಾಪಿ: ವರದಿ ಸಲ್ಲಿಸಲು ಮತ್ತೆ 2 ವಾರ ಕಾಲಾವಕಾಶ ಕೋರಿದ ಪುರಾತತ್ವ ಇಲಾಖೆ

ಪಿಟಿಐ
Published 17 ನವೆಂಬರ್ 2023, 11:00 IST
Last Updated 17 ನವೆಂಬರ್ 2023, 11:00 IST
ಜ್ಞಾನವ್ಯಾಪಿ ಮಸೀದಿ
ಜ್ಞಾನವ್ಯಾಪಿ ಮಸೀದಿ   

ವಾರಾಣಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯ ವರದಿ ಸಲ್ಲಿಸಲು ಇನ್ನೂ 15 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್ಐ) ಶುಕ್ರವಾರ ನ್ಯಾಯಾಯಲಕ್ಕೆ ಅರ್ಜಿ ಸಲ್ಲಿಸಿದೆ.  

ಮಸೀದಿ ಸಂಕೀರ್ಣದ ಸಮೀಕ್ಷೆಯು ಪೂರ್ಣಗೊಂಡಿದ್ದು, ತಾಂತ್ರಿಕ ವರದಿಗಳು ಇನ್ನಷ್ಟೇ ಬರಬೇಕಿದೆ. ಈ ಹಿನ್ನೆಲೆಯಲ್ಲಿ ವರದಿ ಸಲ್ಲಿಸಲು ಹೆಚ್ಚುವರಿ ಸಮಯಾವಕಾಶ ನೀಡಲು ಕೋರಿ ವಾರಾಣಸಿ ಜಿಲ್ಲಾ ನ್ಯಾಯಾಲಯದಲ್ಲಿ ಎಎಸ್ಐ ಅರ್ಜಿ ಸಲ್ಲಿಸಿದೆ ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಮಿತ್ ಶ್ರೀವಾಸ್ತವ ತಿಳಿಸಿದ್ದಾರೆ. 

ಸಮೀಕ್ಷೆಯು ಪೂರ್ಣಗೊಂಡಿದೆ. ಆದರೆ, ಸಮೀಕ್ಷೆ ಕಾರ್ಯಕ್ಕೆ ಬಳಸಿದ ಸಾಧನಗಳನ್ನು ವರದಿಯಲ್ಲಿ ಸೇರಿಸಬೇಕಿದೆ. ಹೀಗಾಗಿ ವರದಿ ಸಲ್ಲಿಸಲು ನವೆಂಬರ್ 17ರವರೆಗೆ ಸಮಯಾವಕಾಶ ಬೇಕು ಎಂದು ನವೆಂಬರ್ 2ರಂದು ನ್ಯಾಯಾಲಯಕ್ಕೆ ಎಎಸ್ಐ ತಿಳಿಸಿತ್ತು. 

ADVERTISEMENT

ಸಮೀಕ್ಷೆಯ ವರದಿ ಸಲ್ಲಿಸಲು ಅಕ್ಟೋಬರ್ 4ರಂದು ನಾಲ್ಕು ವಾರಗಳ ಕಾಲಾವಕಾಶ ನೀಡಿದ್ದ ನ್ಯಾಯಾಲಯವು, ಇದಕ್ಕಿಂತಲೂ ಹೆಚ್ಚಿನ ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.