ADVERTISEMENT

ಜನರ ತೀರ್ಪನ್ನು ನಮ್ರತೆಯಿಂದ ಒಪ್ಪುತ್ತೇನೆ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಮಾರ್ಚ್ 2022, 10:35 IST
Last Updated 10 ಮಾರ್ಚ್ 2022, 10:35 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷವು ಹಿನ್ನಡೆ ಅನುಭವಿಸಿದೆ. ಆ ಹಿನ್ನೆಲೆಯಲ್ಲಿ ಜನರ ತೀರ್ಪನ್ನು ಒಪ್ಪಿಕೊಂಡಿರುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶದಲ್ಲಿ ಜಯಗಳಿಸಿದವರಿಗೆ ಶುಭಾಶಯಗಳು’ ಎಂದು ಹೇಳಿದ್ದಾರೆ.

‘ಕಾಂಗ್ರೆಸ್‌ ಪಕ್ಷದ ‌ಕಾರ್ಯಕರ್ತರ ಶ್ರಮ ಹಾಗೂ ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು’ ಎಂದು ರಾಹುಲ್‌ ಟ್ವೀಟಿಸಿದ್ದಾರೆ.

ADVERTISEMENT

‘ಇದರಿಂದ ನಾವು ಕಲಿಯುತ್ತೇವೆ ಹಾಗೂ ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ’ ಎಂದು ರಾಹುಲ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.