ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶನಿವಾರ ಬೆಳಿಗ್ಗೆ ಭಾರಿ ಮಂಜು ಕವಿದ ವಾತಾವರಣದಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
ಬೆಳಿಗ್ಗೆ ರನ್ವೇ ಕಾಣಿಸದಷ್ಟು ದಟ್ಟವಾಗಿ ಮಂಜು ಆವರಿಸಿದ್ದರಿಂದ ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಮತ್ತು ಅಲ್ಲಿಂದ ಹೊರಡಬೇಕಿದ್ದ ನಾಲ್ಕು ವಿಮಾನಗಳ ಸಂಚಾರಕ್ಕೆ ಅಡ್ಡಿಯಾಗಿದೆ.
ಕೆಲವು ವಿಮಾನಗಳ ಹಾರಾಟ ವಿಳಂಬವಾದರೆ, ಇನ್ನು ಒಂದು ವಿಮಾನ ಸಂಚಾರವನ್ನು ರದ್ದುಗೊಳಿಸಿದೆ.
ವಾಹನ ಸಂಚಾರಕ್ಕೆ ಅಡ್ಡಿ: ದಟ್ಟ ಮಂಜು ಆವರಿಸಿದ್ದರಿಂದ ದೆಹಲಿಯ ಕೆಲವು ಪ್ರದೇಶಗಳಲ್ಲಿ ವಾಹನ ಸವಾರರಿಗೆ ತೊಂದರೆ ಉಂಟಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.