ADVERTISEMENT

ಸುಖ್‌ಬೀರ್ ಸಿಂಗ್ ಬಾದಲ್ ವಾಹನದ ಮೇಲೆ ದಾಳಿ: ಕಾಂಗ್ರೆಸ್ ಕೃತ್ಯ ಎಂದ ಅಕಾಲಿದಳ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಫೆಬ್ರುವರಿ 2021, 10:00 IST
Last Updated 2 ಫೆಬ್ರುವರಿ 2021, 10:00 IST
ಸುಖ್‌ಬೀರ್ ಸಿಂಗ್ ಬಾದಲ್ (ಎಎಫ್‌ಪಿ ಸಂಗ್ರಹ ಚಿತ್ರ)
ಸುಖ್‌ಬೀರ್ ಸಿಂಗ್ ಬಾದಲ್ (ಎಎಫ್‌ಪಿ ಸಂಗ್ರಹ ಚಿತ್ರ)   

ಚಂಡೀಗಡ: ಶಿರೋಮಣಿ ಅಕಾಲಿದಳದ (ಎಸ್‌ಎಡಿ) ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಅವರ ಕಾರಿನ ಮೇಲೆ ಪಂಜಾಬ್‌ನ ಜಲಾಲಾಬಾದ್‌ನಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ದಾಳಿ ಹಿಂದೆ ಪೊಲೀಸ್ ಬೆಂಬಲಿತ ಕಾಂಗ್ರೆಸ್ ಗೂಂಡಾಗಳ ಕೈವಾಡವಿದೆ. ಗೂಂಡಾಗಳು ಬಾದಲ್ ಹತ್ಯೆಗೆ ಸಂಚುಹೂಡಿದ್ದಾರೆ ಎಂದು ಎಸ್‌ಎಡಿ ಆರೋಪಿಸಿರುವುದಾಗಿ ‘ಎಎನ್‌ಐ’ ಟ್ವೀಟ್ ಮಾಡಿದೆ.

ದಾಳಿ ವೇಳೆ ಬಾದಲ್ ಅವರನ್ನು ರಕ್ಷಿಸಲು ಮುಂದಾದ ಪಕ್ಷದ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆದಿದೆ. ಈ ವೇಳೆ, ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದೂ ಪಕ್ಷ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.