ನವದೆಹಲಿ: ಕಡಿಮೆ ತೀವ್ರತೆಯ ಜ್ವರ ಹಾಗೂ ಬ್ರಾಂಕೈಟಿಸ್ (ಶ್ವಾಸನಾಳಗಳ ಒಳಪೊರೆಯ ಉರಿಯೂತ) ಸೇರಿದಂತೆ ವಿವಿಧ ಕಾಯಿಲೆ/ಸೋಂಕುಗಳ ಚಿಕಿತ್ಸೆಗೆ ಪ್ರತಿಜೀವಕಗಳನ್ನು ಬಳಸುವ ಬಗ್ಗೆ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತು (ಐಸಿಎಂಆರ್) ಎಚ್ಚರಿಕೆ ನೀಡಿದೆ.
ಈ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ಐಸಿಎಂಆರ್, ವೈದ್ಯರು ಪ್ರತಿಜೀವಕಗಳನ್ನು ಶಿಫಾರಸು ಮಾಡುವ ಸಂದರ್ಭದಲ್ಲಿ, ಕಾಯಿಲೆ/ಸೋಂಕಿನ ತೀವ್ರತೆಯನ್ನು ಪರಿಗಣಿಸಬೇಕು. ನಿರ್ದಿಷ್ಟ ಅವಧಿ ವರೆಗೆ ಇವುಗಳನ್ನು ತೆಗೆದುಕೊಳ್ಳುವಂತೆ ರೋಗಿಗಳಿಗೆ ಸೂಚಿಸಬೇಕು ಎಂದು ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ.
‘ಸೋಂಕಿಗೆ ಕಾರಣಗಳನ್ನು ಪತ್ತೆ ಮಾಡುವುದು ಪ್ರತಿಜೀವಕಗಳನ್ನು ಶಿಫಾರಸು ಮಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ರೋಗಕಾರಕಗಳು ಯಾವುವು ಎಂಬುದು ಪತ್ತೆಯಾದರೆ, ಅವುಗಳಿಗೆ ತಕ್ಕುದಾದ ಪ್ರತಿಜೀವಕಗಳನ್ನು ಶಿಫಾರಸು ಮಾಡಲು ಅನುಕೂಲವಾಗುತ್ತದೆ’ ಎಂದು ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.