ADVERTISEMENT

ಬಾಬರಿ ಮಸೀದಿ ಧ್ವಂಸ ‘ಶೌರ್ಯ ದಿನ’ ಆಚರಣೆ: ಅಯೋಧ್ಯೆಯಲ್ಲಿ ಬಿಗಿ ಭದ್ರತೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2018, 6:55 IST
Last Updated 6 ಡಿಸೆಂಬರ್ 2018, 6:55 IST
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ   

ಅಯೋಧ್ಯೆ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಡಿಸೆಂಬರ್‌ 06ರಂದು 26 ವರ್ಷ ಪೂರ್ಣಗೊಳ್ಳಲಿದ್ದು, ಬಲಪಂಥೀಯ ಸಂಘಟನೆಗಳು ಈ ದಿನವನ್ನು ಶೌರ್ಯ ದಿನವನ್ನಾಗಿ ಆಚರಿಸಲು ನಿರ್ಧರಿಸಿವೆ. ಹೀಗಾಗಿ ನಗರದಲ್ಲಿ ಕಟ್ಟೆಚ್ಚರ ವಹಿಸಸಲಾಗಿದೆ.

ಗುರುವಾರ(ಡಿಸೆಂಬರ್‌ 06)ಅನ್ನು ಶೌರ್ಯ ದಿನ ಹಾಗೂ ವಿಜಯ ದಿವಸವನ್ನಾಗಿ ಆಚರಿಸಲು ನಿರ್ಧರಿಸಿರುವ ವಿಶ್ವ ಹಿಂದೂ ಪರಿಷತ್‌(ವಿಎಚ್‌ಪಿ) ಹಾಗೂ ಭಜರಂಗ ದಳ ಸಂಘಟನೆಗಳು, ಈ ದಿನ ಮಣ್ಣಿನ ದೀಪಗಳನ್ನು ಬೆಳಗುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿವೆ. ಇದೇ ವೇಳೆ ಮುಸ್ಲಿಂ ಸಂಘಟನೆಗಳು ಗುರುವಾರವನ್ನು ಕರಾಳ ದಿನವನ್ನಾಗಿ ಆಚರಿಸಲು ನಿರ್ಧಿರಿಸಿವೆ.

ಹೀಗಾಗಿ ಅಯೋಧ್ಯೆಯಲ್ಲಿ ಭದ್ರತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸ್ಥಳೀಯ ಆಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.

ಸದ್ಯಮುಂಜಾಗ್ರತೆಯಾಗಿ ಸಾರ್ವಜನಿಕ ಸ್ಥಳಗಳಾದ ಚಿತ್ರ ಮಂದಿರಗಳು, ರೈಲು ನಿಲ್ದಾಣ, ಮಾರುಕಟ್ಟೆ ಮತ್ತಿತರ ಪ್ರದೇಶಗಳಲ್ಲಿಪೊಲೀಸರು ಹಾಗೂ ಕೇಂದ್ರೀಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.ನಗರಕ್ಕೆ ಪ್ರವೇಶ ಕಲ್ಪಿಸುವ ಮಾರ್ಗಗಳಲ್ಲಿಯೂ ರಕ್ಷಣಾ ಪಡೆಗಳನ್ನು ನಿಯೋಜಿಸಲಾಗಿದ್ದು, ವಾಹನಗಳ ಮೇಲೆ ನಿಗಾ ಇಡಲಾಗಿದೆ.

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶವನ್ನು ಕಾಯ್ದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಬಾಬರಿ ಮಸೀದಿ ಕ್ರಿಯಾಸಮಿತಿಯು ಮನವಿ ಮಾಡಿದೆ. ಜೊತೆಗೆ ಈ ದಿನವನ್ನು ಶಾಂತಿಯುತವಾಗಿ ಆಚರಿಸಲು ಸಾರ್ವಜನಿಕರಿಗೆ ಕರೆ ನೀಡಿದೆ.

ರಾಮ ದೇವಾಲಯವನ್ನು ನಾಶಗೊಳಿಸಿ ಬಳಿಕ ಅದೇ ಸ್ಥಳದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂದು ಆರೋಪಿಸಿದ್ದಬಲ ಪಂಥೀಯ ಸಂಘಟನೆಗಳ ಕಾರ್ಯಕರ್ತರು, 1992ರ ಡಿಸೆಂಬರ್‌ 06ರಂದು ಬಾಬ್ರಿ ಮಸೀದಿ ಮೇಲೆ ದಾಳಿ ಮಾಡಿ ದ್ವಂಸಗೊಳಿಸಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.