ADVERTISEMENT

ಅಯೋಧ್ಯೆ ವಿವಾದಕ್ಕೆ ಸಂಧಾನ: ಇಂದು ಆದೇಶ

ಪಿಟಿಐ
Published 7 ಮಾರ್ಚ್ 2019, 19:22 IST
Last Updated 7 ಮಾರ್ಚ್ 2019, 19:22 IST
ಸು‍ಪ್ರೀಂಕೋರ್ಟ್‌
ಸು‍ಪ್ರೀಂಕೋರ್ಟ್‌   

ನವದೆಹಲಿ: ಅಯೋಧ್ಯೆಯಲ್ಲಿನ ರಾಮಜನ್ಮಭೂಮಿ–ಬಾಬರಿ ಮಸೀದಿ ಭೂ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಸಂಧಾನ ನಡೆಸಬೇಕೇ ಬೇಡವೇ ಎಂಬ ಬಗ್ಗೆ ಸುಪ್ರೀಂಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಲಿದೆ.

ನಿರ್ಮೋಹಿ ಅಖಾಡ ಹೊರತುಪಡಿಸಿದಂತೆ ಉಳಿದ ಹಿಂದುತ್ವಪರ ಸಂಘಟನೆಗಳು ಈ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸುವುಕ್ಕೆ ವಿರೋಧ ವ್ಯಕ್ತಪಡಿಸಿದ್ದರೆ, ಮುಸ್ಲಿಂ ಸಂಘಟನೆಗಳು ಈ ಪ್ರಸ್ತಾವವನ್ನು ಸ್ವಾಗತಿಸಿವೆ.

ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಐವರು ನ್ಯಾಯಾಧೀಶರನ್ನು ಒಳಗೊಂಡ ಸಂವಿಧಾನ ಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.