ADVERTISEMENT

ಮೂರೂವರೆ ವರ್ಷದಲ್ಲಿ ರಾಮಮಂದಿರ: ಗೋವಿಂದ ದೇವ ಗಿರಿಜೀ ಮಹಾರಾಜ್‌

ಪಿಟಿಐ
Published 23 ಫೆಬ್ರುವರಿ 2020, 19:41 IST
Last Updated 23 ಫೆಬ್ರುವರಿ 2020, 19:41 IST

ಜೈಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾದಮೂರೂವರೆ ವರ್ಷದೊಳಗೆ ದೇವಾಲಯ ಉದ್ಘಾಟನೆಗೊಳ್ಳಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಗೋವಿಂದ ದೇವ ಗಿರಿಜೀ ಮಹಾರಾಜ್‌ ಹೇಳಿದ್ದಾರೆ.

ಭಕ್ತರ ಧನ ಸಹಾಯದಿಂದ ನಿರ್ಮಾಣ ಕಾರ್ಯ ಆದಷ್ಟು ಬೇಗವೇ ಪೂರ್ಣಗೊಳ್ಳಲಿದೆ. ಅಕ್ಷರಧಾಮ ದೇವಾಲಯವನ್ನು ಮೂರು ವರ್ಷಗಳಲ್ಲಿ ನಿರ್ಮಾಣ ಮಾಡಿದಂತೆಯೇ ಶ್ರೀರಾಮ ಮಂದಿರವನ್ನು ನಿರ್ಮಿಸಲಾಗುವುದು ಎಂದು ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT