ADVERTISEMENT

ಬಾಬರಿ ಮಸೀದಿ ಧ್ವಂಸ: 9 ತಿಂಗಳಲ್ಲಿ ತೀರ್ಪಿಗೆ ಸೂಚನೆ

ಬಾಬರಿ ಮಸೀದಿ ಧ್ವಂಸದ ಒಳಸಂಚು ಪ್ರಕರಣ

ಪಿಟಿಐ
Published 19 ಜುಲೈ 2019, 16:54 IST
Last Updated 19 ಜುಲೈ 2019, 16:54 IST
   

ನವದೆಹಲಿ: ‘ಬಾಬರಿ ಮಸೀದಿ ಧ್ವಂಸದ ಒಳಸಂಚು ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಪೂರ್ತಿಗೊಳಿಸಿ, 9 ತಿಂಗಳೊಳಗೆ ತೀರ್ಪು ನೀಡಬೇಕು’ ಎಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಸೂಚನೆ ನೀಡಿದೆ.

‘ಈ ಪ್ರಕರಣದ ವಿಚಾರಣೆ ಮುಗಿಸಲು ಇನ್ನೂ ಆರು ತಿಂಗಳ ಕಾಲಾವಕಾಶ ನೀಡಬೇಕು’ ಎಂದು ವಿಶೇಷ ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ಅದನ್ನು ನ್ಯಾಯಾಲಯ ಮಾನ್ಯ ಮಾಡಿದೆ.

ಬಿಜೆಪಿ ನಾಯಕರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾಭಾರತಿ, ವಿನಯ್‌ ಕಟಿಯಾರ್‌ ಹಾಗೂ ಸಾಧ್ವಿ ರಿತಂಬರಾ ಅವರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.