ADVERTISEMENT

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು: ವಿವಿಧ ನಾಯಕರ ಪ್ರತಿಕ್ರಿಯೆಗಳು

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 9:35 IST
Last Updated 30 ಸೆಪ್ಟೆಂಬರ್ 2020, 9:35 IST
ಅಡ್ವಾಣಿ, ಆದಿತ್ಯ ನಾಥ, ರಾಜನಾಥ್ ಸಿಂಗ್
ಅಡ್ವಾಣಿ, ಆದಿತ್ಯ ನಾಥ, ರಾಜನಾಥ್ ಸಿಂಗ್   

ಬಾಬರಿ ಮಸೀದಿ ಧ್ವಂಸ ಪ್ರಕರಣ ಕುರಿತು ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ.ಈ ತೀರ್ಪು ರಾಮ ಜನ್ಮಭೂಮಿ ಚಳವಳಿಯ ಬಗ್ಗೆ ನನ್ನ ವೈಯಕ್ತಿಕ ಮತ್ತು ಬಿಜೆಪಿಯ ನಂಬಿಕೆ ಮತ್ತು ಬದ್ಧತೆಯನ್ನು ಸಮರ್ಥಿಸುತ್ತದೆ

-ಲಾಲ್‌ಕೃಷ್ಣ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ, ತೀರ್ಪು ಪ್ರಕಟಗೊಂಡ ನಂತರ ಮೊದಲ ಪ್ರತಿಕ್ರಿಯೆ

ಬಾಬ್ರಿ ಮಸೀದಿ ಪ್ರಕರಣದಲ್ಲಿಮತಬ್ಯಾಂಕ್ ರಾಜಕಾರಣಕ್ಕಾಗಿ ಸಂತರು, ಬಿಜೆಪಿ ನಾಯಕರು, ವಿಶ್ವ ಹಿಂದೂಪರಿಷತ್ ಕಾರ್ಯಕರ್ತರ ವಿರುದ್ಧಅಂದಿನ ಕಾಂಗ್ರೆಸ್‌ ಸರ್ಕಾರ ಸುಳ್ಳು ಪ್ರಕರಣಗಳನ್ನು ದಾಖಲಿಸಿತ್ತು ಎಂದು ಈ ತೀರ್ಪು ಸಾಬೀತುಪಡಿಸಿದೆ.

ADVERTISEMENT

ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶದ ಮುಖ್ಯಮಂತ್ರಿ.

***

ಇದು ನ್ಯಾಯಾಲಯದ ಐತಿಹಾಸಿಕ ನಿರ್ಧಾರ. ಈ ತೀರ್ಪು ಅಯೋಧ್ಯೆಯಲ್ಲಿ ಡಿಸೆಂಬರ್ 6 ರ ಘಟನೆಗೆ ಯಾವುದೇ ಪಿತೂರಿ ನಡೆದಿಲ್ಲ ಎಂದು ಸಾಬೀತುಪಡಿಸಿದೆ. ಅಂದಿನ ನಮ್ಮ ಕಾರ್ಯಕ್ರಮ ಮತ್ತು ರ‍್ಯಾಲಿಗಳು ಯಾವುದೇ ಪಿತೂರಿಯ ಭಾಗವಾಗಿರಲಿಲ್ಲ.

ಮುರಳಿ ಮನೋಹರ್ ಜೋಶಿ, ಬಿಜೆಪಿ ಮುಖಂಡ

****

ಲಖನೌದ ಸಿಬಿಐ ವಿಶೇಷ ನ್ಯಾಯಾಲಯ ಪ್ರಕರಣದ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಎಷ್ಟೇ ವಿಳಂಬವಾದರೂ ನ್ಯಾಯ ಗೆಲ್ಲುತ್ತದೆ.

ರಾಜನಾಥ್ ಸಿಂಗ್,ರಕ್ಷಣಾ ಸಚಿವ

ಇದು ಸಂಪೂರ್ಣ ನ್ಯಾಯದ ಅಣಕು. ಬಾಬ್ರಿಮಸೀದಿ ಧ್ವಂಸಗೊಳಿಸಿದ ಆರೋಪ ಹೊತ್ತಿರುವ ಎಲ್ಲರೂ ಖುಲಾಸೆಗೊಂಡಿದ್ದಾರೆ. ಇದು ಸ್ವಯಂ ಪ್ರಚೋದಿತವೇ ?

‘ಬಾಬ್ರಿ ಮಸೀದಿ ಧ್ವಂಸ ಮಾಡಿದ್ದು ಕಾನೂನಿನ ಉಲ್ಲಂಘನೆ ಎಂದು ಅಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದರು. ಇಂದು ಈ ತೀರ್ಪು. ಶೇಮ್‌...

ಸೀತಾರಾಂ ಯಚೂರಿ, ಸಿಪಿಐ ನಾಯಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.