ADVERTISEMENT

ಭೂಕುಸಿತ: ಬದರೀನಾಥ ರಾಷ್ಟ್ರೀಯ ಹೆದ್ದಾರಿ ಬಂದ್‌

ಪಿಟಿಐ
Published 29 ಜೂನ್ 2023, 12:32 IST
Last Updated 29 ಜೂನ್ 2023, 12:32 IST
(ಐಎನ್‌ಎಎಸ್‌ ಪೋಟೋ)
(ಐಎನ್‌ಎಎಸ್‌ ಪೋಟೋ)   

ಗೋಪೇಶ್ವರ್‌: ಚಮೋಲಿ ಜಿಲ್ಲೆಯ ಛಿನ್ಕಾ ಪ್ರದೇಶದಲ್ಲಿ ಸುರಿದ ಭಾರಿ ಮಳೆಯಿಂದ ಗುರುವಾರ ಭೂಕುಸಿತ ಸಂಭವಿಸಿದ್ದು ಬದರೀನಾಥಕ್ಕೆ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ.

ಬದರೀನಾಥ ಮತ್ತು ಹೇಮಕುಂಡ್ ಸಾಹಿಬ್‌ಗೆ ತೆರಳುತ್ತಿದ್ದ ನೂರಾರು ಪ್ರಯಾಣಿಕರು ದಾರಿ ಮಧ್ಯೆ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತದಿಂದ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ, ಹೆದ್ದಾರಿಯನ್ನು ಸಂಚಾರಕ್ಕೆ ತೆರವುಗೊಳಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದಾರಿಯಲ್ಲಿ ಸಿಲುಕಿರುವ ಯಾತ್ರಾರ್ಥಿಗಳಿಗೆ ಸ್ಥಳೀಯ ಆಡಳಿತವು  ಕುಡಿಯುವ ನೀರು ಮತ್ತು ಆಹಾರ ಒದಗಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.