ADVERTISEMENT

ನವಲಖಾ, ತೇಲ್ತುಂಬೆ ಜಾಮೀನು ಅರ್ಜಿ ತಿರಸ್ಕೃತ, ಶರಣಾಗಲು ಸುಪ್ರೀಂ ಕೋರ್ಟ್ ಆದೇಶ

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣ

ಪಿಟಿಐ
Published 16 ಮಾರ್ಚ್ 2020, 21:37 IST
Last Updated 16 ಮಾರ್ಚ್ 2020, 21:37 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಹಕ್ಕುಗಳ ಹೋರಾಟಗಾರರಾದ ಗೌತಮ್ ನವಲಖಾ ಮತ್ತು ಆನಂದ್ ತೇಲ್ತುಂಬೆ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಎಂ.ಆರ್. ಷಾ ಅವರನ್ನೊಳಗೊಂಡ ಪೀಠವು ಇಬ್ಬರು ಹೋರಾಟಗಾರರಿಗೆ ಮೂರು ವಾರದೊಳಗೆ ಶರಣಾಗಲು ಸೂಚಿಸಿದೆ. ಇಬ್ಬರ ಪಾಸ್‌ಪೋರ್ಟ್‌ಗಳನ್ನೂ ಒಪ್ಪಿಸುವಂತೆ ನ್ಯಾಯಾಲಯ ಹೇಳಿದೆ.

2018ರ ಜ. 1ರಂದು ಪುಣೆ ಜಿಲ್ಲೆಯ ಕೋರೆಗಾಂವ್ ಭೀಮಾ ಗ್ರಾಮದಲ್ಲಿ ನಡೆದ ಹಿಂಸಾಚಾರದ ನಂತರ ನವಲಖಾ, ತೇಲ್ತುಂಬೆ ಮತ್ತು ಇತರ ಕಾರ್ಯಕರ್ತರ ವಿರುದ್ಧ ಮಾವೋವಾದಿಗಳ ಸಂಪರ್ಕ ಸೇರಿದಂತೆ ಇತರ ಆರೋಪಗಳ ಕಾರಣಕ್ಕಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.