ADVERTISEMENT

ಬಿಜೆಪಿ ಶಾಸಕನಿಗೆ ಜಾಮೀನು

ಪಿಟಿಐ
Published 29 ಜೂನ್ 2019, 18:43 IST
Last Updated 29 ಜೂನ್ 2019, 18:43 IST

ಭೋಪಾಲ್: ಪುರಸಭೆ ಅಧಿಕಾರಿಯನ್ನು ಕ್ರಿಕೆಟ್ ಬ್ಯಾಟ್‌ನಿಂದ ಥಳಿಸಿ ಮೂರು ದಿನದ ಹಿಂದೆ ಜೈಲು ಸೇರಿದ್ದ ಬಿಜೆಪಿ ಶಾಸಕ ಆಕಾಶ್ ವಿಜಯವರ್ಗೀಯ ಅವರಿಗೆ ವಿಶೇಷ ಕೋರ್ಟ್ ಶನಿವಾರ ಜಾಮೀನು ನೀಡಿದೆ.

ಹಲ್ಲೆ ಪ್ರಕರಣದಲ್ಲಿ ವೈಯಕ್ತಿಕವಾಗಿ ₹50 ಸಾವಿರ ಮೌಲ್ಯದ ಬಾಂಡ್ ಹಾಗೂ ಮತ್ತೊಂದು ಪ್ರಕರಣದಲ್ಲಿ ₹20 ಸಾವಿರ ಮೌಲ್ಯದ ಬಾಂಡ್ ಒದಗಿಸುವಂತೆ ಆಕಾಶ್ ಅವರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸುರೇಶ್ ಸಿಂಗ್ ಸೂಚಿಸಿದರು. ಜಾಮೀನು ನೀಡಿದರೆ ತಪ್ಪು ಸಂದೇಶ ಹೋಗುತ್ತದೆ ಎಂದು ಪ್ರಾಸಿಕ್ಯೂಷನ್ ವಾದಿಸಿತು.

ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯ ಅವರ ಪುತ್ರ ಆಕಾಶ್ ಇಂದೋರ್‌ನ ಶಾಸಕ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.