ADVERTISEMENT

ಬಜರಂಗ ದಳ ಕಾರ್ಯಕರ್ತರ ಹತ್ಯೆ: ಇಂದಿನಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2023, 16:16 IST
Last Updated 16 ಜನವರಿ 2023, 16:16 IST
..
..   

ನವದೆಹಲಿ: ‘ಜಿಹಾದಿಗಳು ಕಳೆದ ಎರಡು ವರ್ಷಗಳಲ್ಲಿ ಬಜರಂಗ ದಳದ 9 ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು, 32 ಮಂದಿಯ ಮೇಲೆ ದಾಳಿ ನಡೆಸಿದ್ದಾರೆ. ಇದನ್ನು ಖಂಡಿಸಿ ಬಜರಂಗ ದಳವು ದೇಶದಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಇದೇ 17 ಮತ್ತು 18ರಂದು ಪ್ರತಿಭಟನೆ ನಡೆಸಲಿದೆ’ ಎಂದು ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.

‘ಬಜರಂಗ ದಳದ ಕಾರ್ಯಕರ್ತ ಎಂಬ ಕಾರಣಕ್ಕೆ ಅಸ್ಸಾಂ ರಾಜ್ಯದ ಕರೀಂಗಂಜ್‌ ಜಿಲ್ಲೆಯ ನಿವಾಸಿಯಾಗಿದ್ದ ಶಂಭು ಕೊಯಿರಿ ಎಂಬ ಯುವಕನನ್ನು ಇದೇ ತಿಂಗಳ 8ರಂದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಜರಂಗ ದಳದ ಶಿಬಿರ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಆತನ ಮೇಲೆ ಮಾರಕಾಸ್ತ್ರ ಹಿಡಿದಿದ್ದ ಗುಂ‍ಪೊಂದು ಲವಿರ್‌ಪುವ ಎಂಬಲ್ಲಿ ದಾಳಿ ನಡೆಸಿತ್ತು’ ಎಂದು ವಿಎಚ್‌ಪಿ ಕೇಂದ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್‌ ಹೇಳಿದ್ದಾರೆ.

‘17 ಮತ್ತು 18ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿರುವ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ’ ಎಂದು ಪ್ರಕಟಣೆ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.