ADVERTISEMENT

ಜನರ ಧಾರ್ಮಿಕ ಭಾವನೆಗಳ ಜೊತೆ ಆಟವಾಡಬೇಡಿ: ಮೊಯಿತ್ರಾಗೆ ಅಭಿಷೇಕ್ ಮನು ಸಿಂಘ್ವಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜುಲೈ 2022, 13:52 IST
Last Updated 6 ಜುಲೈ 2022, 13:52 IST
 ಅಭಿಷೇಕ್ ಮನು ಸಿಂಘ್ವಿ
ಅಭಿಷೇಕ್ ಮನು ಸಿಂಘ್ವಿ   

ನವದೆಹಲಿ: ಕಾಳಿ ಮಾತೆಯು ನನ್ನ ಪ್ರಕಾರ ಮಾಂಸ ತಿನ್ನುವ, ಮದ್ಯ ಸ್ವೀಕರಿಸುವ ದೇವತೆ. ಅವರವರ ದೇವತೆಗಳನ್ನು ಊಹಿಸಿಕೊಳ್ಳುವ ಅಧಿಕಾರ ಎಲ್ಲರಿಗೂ ಇದೆ ಎಂದು ಹೇಳಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ತಿಳಿ ಹೇಳಿದ್ದಾರೆ.

ನಾನು ಯಾವುದೇ ಪಕ್ಷದ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಆದರೆ, ನಮ್ಮ ನಂಬಿಕೆಗಳ ಚಿಹ್ನೆಗಳು ಮತ್ತು ಸಂಸ್ಕೃತಿಯ ಸಾರದ ವಿಷಯದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳಬೇಕು ಎಂದು ನಾನು ನಂಬುತ್ತೇನೆ. ದೇಶ ಅಥವಾ ವಿದೇಶ ಎಲ್ಲಿಯಾದರೂ ಸರಿ. ನಮ್ಮ ಸಂಸ್ಕೃತಿಯ ಹೃದಯ ಮತ್ತು ಆತ್ಮವನ್ನು ಯಾರೂ ಕ್ಷುಲ್ಲಕಗೊಳಿಸಲು ಸಾಧ್ಯವಿಲ್ಲ ಎಂದು ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.

ಅಂತಹ ಚಿಹ್ನೆಗಳು, ಸಂಸ್ಕೃತಿ ಮತ್ತು ನಂಬಿಕೆಯ ಮೇಲೆ ಪ್ರತಿಫಲಿಸುವ ಜನರ ಭಾವನೆಗಳ ಜೊತೆ ಆಟವಾಡುವ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.