ಜಮ್ಮು: ಕದನ ವಿರಾಮ ಉಲ್ಲಂಘನೆಯನ್ನು ಎರಡನೇ ದಿನವೂ ಮುಂದುವರಿಸಿರುವ ಪಾಕಿಸ್ತಾನದ ಸೇನೆ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಗಡಿ ಠಾಣೆಗಳು ಮತ್ತು ಹಳ್ಳಿಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದೆ.
ಮೂವರು ಮಹಿಳೆಯರು ಹಾಗೂ ಬಾಲಕ ಸೇರಿ ನಾಲ್ವರು ಗ್ರಾಮಸ್ಥರು ಗಾಯಗೊಂಡಿದ್ದಾರೆ.
ಈ ವರ್ಷ ಪಾಕಿಸ್ತಾನವು 2000ಕ್ಕಿಂತ ಅಧಿಕ ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ. 21 ಭಾರತೀಯರು ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.