ADVERTISEMENT

ಮಹಾರಾಷ್ಟ್ರದ ಒಂದಿಂಚೂ ಭೂಮಿಯನ್ನು ಬಿಡೆವು: ಏಕನಾಥ ಶಿಂದೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ನವೆಂಬರ್ 2022, 5:21 IST
Last Updated 25 ನವೆಂಬರ್ 2022, 5:21 IST
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ (ಪಿಟಿಐ ಚಿತ್ರ)
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ (ಪಿಟಿಐ ಚಿತ್ರ)   

ಮುಂಬಯಿ: ‘ಮಹಾರಾಷ್ಟ್ರದ ಒಂದಿಂಚೂ ಭೂಮಿಯನ್ನು ಯಾರಿಗೂ ಬಿಟ್ಟು ಕೊಡುವುದಿಲ್ಲ‘ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ.‌

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್‌ ತಾಲೂಕಿನ ಗ್ರಾಮಗಳು ಕರ್ನಾಟಕಕ್ಕೆ ಸೇರಬೇಕು ಎನ್ನುವ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಶಿಂದೆ ಅವರು ಈ ರೀತಿ ತಿರುಗೇಟು ನೀಡಿದ್ದಾರೆ.

ನಾವು ಗಡಿ ಭಾಗದಲ್ಲಿರುವ ಮರಾಠಿ ಭಾಷಿಕರಿಗೆ ನ್ಯಾಯ ಒದಗಿಸಲು ನಾವು ಎಲ್ಲಾ ರೀತಿಯ ಕೆಲಸ ಮಾಡುತ್ತಿದ್ದೇವೆ. ಮಹಾರಾಷ್ಟ್ರದ ಒಂದಿಂಚೂ ಭೂಮಿಯನ್ನು ನಾವು ಬಿಟ್ಟುಕೊಡುವುದಿಲ್ಲ‘ ಎಂದು ಶಿಂದೆ ಹೇಳಿದ್ದಾರೆ.

ADVERTISEMENT

‘ಗಡಿಯಲ್ಲಿರುವ 40 ಗ್ರಾಮಗಳ ಸಮಸ್ಯೆಯನ್ನು ಬಗೆಹರಿಸುವುದು ನಮ್ಮ ಸರ್ಕಾರದ ಜವಾವ್ದಾರಿ‘ ಎಂದು ಶಿಂದೆ ಹೇಳಿದ್ದಾರೆ.

ಗಡಿಭಾಗದಲ್ಲಿರುವ ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರುವುದಾಗಿ ನಿರ್ಣಯ ಮಾಡಿದ್ದವು.

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಮಗೆ ಸೇರಬೇಕು ಎನ್ನುವುದು ಮಹಾರಾಷ್ಟ್ರ ಸರ್ಕಾರದ ವಾದ. ಸದ್ಯ ಈ ವ್ಯಾಜ್ಯ ಸು‍ಪ್ರೀಂ ಕೋರ್ಟ್‌ನಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.