ADVERTISEMENT

ಬೆತ್ತಲೆ ಪ್ರಕರಣ: ಮಾನವ ಹಕ್ಕು ಆಯೋಗ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2023, 15:58 IST
Last Updated 15 ಡಿಸೆಂಬರ್ 2023, 15:58 IST
   

ನವದೆಹಲಿ: ಬೆಳಗಾವಿಯಲ್ಲಿ ಮಹಿಳೆಯ ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಕರ್ನಾಟಕ ಸರ್ಕಾರಕ್ಕೆ ನೋಟಿಸ್‌ ನೀಡಿದೆ. 

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್‌ ಮಹಾನಿರ್ದೇಶಕರು ನಾಲ್ಕು ವಾರಗಳಲ್ಲಿ ವಿವರವಾದ ವರದಿ ಸಲ್ಲಿಸಬೇಕು ಎಂದು ಆಯೋಗ ಸೂಚಿಸಿದೆ. ಇದು ಎಫ್‌ಐಆರ್‌ನ ದಾಖಲಾತಿಯ ಸ್ಥಿತಿ, ತನಿಖೆಯ ಪ್ರಗತಿ, ಬಂಧನ, ಸಂತ್ರಸ್ತರಿಗೆ ಪರಿಹಾರ ನೀಡಿದ್ದರೆ ಆ ಬಗ್ಗೆ ವಿವರ ಹಾಗೂ ರಾಜ್ಯದಲ್ಲಿ ಅಂತಹ ಘಟನೆಗಳನ್ನು ತಡೆಗಟ್ಟಲು ತೆಗೆದುಕೊಂಡ ಅಥವಾ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಒಳಗೊಂಡಿರಬೇಕು ಎಂದು ಹೇಳಿದೆ. 

ಆಯೋಗದ ಡಿಐಜಿ ಅವರು ತ್ವರಿತವಾಗಿ ಸತ್ಯಶೋಧನಾ ತಂಡ ರಚಿಸಿ ಘಟನಾ ಸ್ಥಳದಲ್ಲಿ ವಿಚಾರಣೆ ನಡೆಸಬೇಕು ಹಾಗೂ ಎರಡು ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದೂ ಸೂಚಿಸಿದೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.