ADVERTISEMENT

ಶಾಲಾ ಸಿಬ್ಬಂದಿ ನೇಮಕಾತಿ ಹಗರಣ: ಆರು ಮಂದಿ ಸಿಬಿಐ ವಶಕ್ಕೆ

ಪಿಟಿಐ
Published 18 ಫೆಬ್ರುವರಿ 2023, 14:19 IST
Last Updated 18 ಫೆಬ್ರುವರಿ 2023, 14:19 IST
   

ಕೋಲ್ಕತ್ತ : ‘ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) ನಡೆಸಿದ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಸಿಬಿಐ ಬಂಧಿಸಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

‘ಬಂಧಿತರು ಏಜೆಂಟರಂತೆ ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡಿ ರಾಜ್ಯದ ವಿವಿಧ ಶಾಲೆಗಳಲ್ಲಿ ಉದ್ಯೋಗಕ್ಕೆ ಸೇರಲು ಸಹಾಯ ಮಾಡುತ್ತಿದ್ದರು ಎನ್ನಲಾಗಿದೆ’ ಎಂದು ಅವರು ಹೇಳಿದರು.

‘ಬಂಧಿತರ ವಿರುದ್ಧ ನಮಗೆ ನಿರ್ದಿಷ್ಟ ಸಾಕ್ಷಿಗಳು ಸಿಕ್ಕಿವೆ’ ಎಂದು ಸಿಬಿಐ ಶುಕ್ರವಾರ ಸಂಜೆ ತಿಳಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.