ADVERTISEMENT

ಎಸಿ ಘಟಕದಲ್ಲಿ ಬೆಂಕಿ ಶಂಕೆ: ಬೆಂಗಳೂರಿಗೆ ಹೊರಟಿದ್ದ AI ವಿಮಾನ ದೆಹಲಿಗೆ ವಾಪಸ್

ಪಿಟಿಐ
Published 17 ಮೇ 2024, 15:59 IST
Last Updated 17 ಮೇ 2024, 15:59 IST
<div class="paragraphs"><p>ಏರ್ ಇಂಡಿಯಾ ವಿಮಾನ ಪ್ರಾತಿನಿಧಿಕ ಚಿತ್ರ</p></div>

ಏರ್ ಇಂಡಿಯಾ ವಿಮಾನ ಪ್ರಾತಿನಿಧಿಕ ಚಿತ್ರ

   

ನವದೆಹಲಿ: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಹವಾ ನಿಯಂತ್ರಣ ಘಟಕದಲ್ಲಿ ಬೆಂಕಿ ಶಂಕೆ ಹಿನ್ನೆಲೆಯಲ್ಲಿ ವಿಮಾನವು ಮತ್ತೆ ದೆಹಲಿಗೆ ಹಿಂದಿರುಗಿದ್ದು, ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.

AI 807 ವಿಮಾನವು ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಐಜಿಐಎ) ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ವಿಮಾನದಲ್ಲಿ 175 ಮಂದಿ ಪ್ರಯಾಣಿಕರಿದ್ದರು ಎಂದು ಮೂಲಗಳು ತಿಳಿಸಿವೆ.

ಹವಾ ನಿಯಂತ್ರಿತ ವ್ಯವಸ್ಥೆಯಲ್ಲಿ ಬೆಂಕಿಯ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ಸುರಕ್ಷಿತವಾಗಿ ಸಂಜೆ 6.40ಕ್ಕೆ ಲ್ಯಾಂಡ್ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.

ಪ್ರಯಾಣಿಕರು ಬೆಂಗಳೂರಿಗೆ ಪ್ರಯಾಣ ಬೆಳೆಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.