ADVERTISEMENT

ವಿಂಗ್ ಕಮಾಂಡರ್ ಅಭಿನಂದನ್‍ಗೆ ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ

ಪಿಟಿಐ
Published 3 ಮಾರ್ಚ್ 2019, 11:22 IST
Last Updated 3 ಮಾರ್ಚ್ 2019, 11:22 IST
ಅಭಿನಂದನ್
ಅಭಿನಂದನ್    

ನವದೆಹಲಿ: ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಅಖಿಲ ಭಾರತೀಯ ದಿಗಂಬರ ಜೈನ ಮಹಾಸಮಿತಿ ಹೇಳಿದೆ.

ಪಾಕಿಸ್ತಾನದ ಎಫ್-16 ವಿಮಾನವನ್ನು ಬೆನ್ನಟ್ಟಿ ಹೊಡೆದುರುಳಿಸಿದ ಮಿಗ್ 21- ಬೈಸನ್ ಪೈಲಟ್ ಅಭಿನಂದನ್ ಅವರಿಗೆ ಈ ಪುರಸ್ಕಾರ ನೀಡಿ ಗೌರವಿಸಲು ತೀರ್ಮಾನಿಸಿರುವುದಾಗಿ ಮಹಾಸಮಿತಿಯ ಅಧ್ಯಕ್ಷ ಮನೀಂದ್ರ ಜೈನ್ ಹೇಳಿದ್ದಾರೆ.

ಈ ಪುರಸ್ಕಾರ ಪಡೆಯುವ ಮೊದಲ ವ್ಯಕ್ತಿಯಾಗಿದ್ದಾರೆ ಅಭಿನಂದನ್.

ADVERTISEMENT

₹ 2.51 ಲಕ್ಷ ನಗದು, ಸ್ಮರಣಿಕೆ ಮತ್ತ ಪ್ರಮಾಣ ಪತ್ರವನ್ನು ಒಳಗೊಂಡ ಈ ಪುರಸ್ಕಾರವನ್ನು ಮಹಾವೀರ ಜಯಂತಿ ದಿನ (ಏಪ್ರಿಲ್ 17) ಪ್ರದಾನ ಮಾಡಲಾಗುವುದು ಎಂದು ಮಹಾಸಮಿತಿಯ ನಿರ್ವಾಹಕ ಪರಾಸ್ ಲೊಹಾಡೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.