ADVERTISEMENT

ಜಾಹೀರಾತು ಮೂಲಕ ‌‌ಹತಾಶೆ ವ್ಯಕ್ತಪಡಿಸುವ ಏಕೈಕ ರಾಜಕೀಯ ಪಕ್ಷ ಬಿಜೆಪಿ: ಕಾಂಗ್ರೆಸ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಅಕ್ಟೋಬರ್ 2022, 11:21 IST
Last Updated 6 ಅಕ್ಟೋಬರ್ 2022, 11:21 IST
ಭಾರತ್‌ ಜೋಡೊ ಯಾತ್ರೆಯಲ್ಲಿ ರಾಹುಲ್‌ ಗಾಂಧಿ
ಭಾರತ್‌ ಜೋಡೊ ಯಾತ್ರೆಯಲ್ಲಿ ರಾಹುಲ್‌ ಗಾಂಧಿ   

ಬೆಂಗಳೂರು: ಕಾಂಗ್ರೆಸ್‌ ನಾಯಕರ ವಿರುದ್ಧ ಪತ್ರಿಕೆಗಳಿಗೆ ಜಾಹೀರಾತು ನೀಡಿರುವ ಬಿಜೆಪಿಯ ಕ್ರಮವನ್ನು ಕಾಂಗ್ರೆಸ್‌ ಖಂಡಿಸಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕೆಪಿಸಿಸಿ, ‘ತನ್ನ ಹತಾಶೆ, ಸೋಲು, ನೋವುಗಳನ್ನು ಜಾಹೀರಾತು ನೀಡಿ ವ್ಯಕ್ತಪಡಿಸುವ ಏಕೈಕ ರಾಜಕೀಯ ಪಕ್ಷ ಬಿಜೆಪಿ’ ಎಂದು ಟೀಕಿಸಿದೆ.

‘ಒಂದೇ ವಾರದಲ್ಲಿ ಎರಡೆರೆಡು ಭಾರಿ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ನೀಡುತ್ತಿರುವ ಬಿಜೆಪಿಯ ಹತಾಶೆ ಹಿಮಾಲಯದೆತ್ತರಕ್ಕೆ ಏರಿದೆ. ಅದು ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ಬಾಕಿ’ ಎಂದು ವ್ಯಂಗ್ಯವಾಡಿದೆ.

ADVERTISEMENT

ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರನ್ನು ಗುರಿಯಾಗಿಸಿ ಬಿಜೆಪಿ ಜಾಹೀರಾತು ನೀಡಿದೆ.

ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೊ ಯಾತ್ರೆಗೆ ಉತ್ತಮ ಜನಸ್ಪಂದನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬಿಜೆಪಿ ಪತ್ರಿಕೆಗಳಿಗೆ ಜಾಹೀರಾತು ನೀಡಿದೆ ಎಂದು ಆರೋಪಿಸಲಾಗಿದೆ.

ಕಾಂಗ್ರೆಸ್‌ ಪಾದಯಾತ್ರೆಯು ಮಂಡ್ಯ ಜಿಲ್ಲೆಯಲ್ಲಿ ಸಾಗುತ್ತಿದೆ. ಈ ವೇಳೆ, ಪಕ್ಷದ ನಾಯಕಿ ಸೋನಿಯಾ ಗಾಂಧಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.