ಜೈಪುರ:ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಅನ್ನು₹ 500ಕ್ಕೆ ನೀಡುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಘೋಷಿಸಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರಾಜಸ್ಥಾನದ ಅಲ್ವಾರ್ನಲ್ಲಿ ಸೋಮವಾರ ಸಾಗಿದ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಗೆಹಲೋತ್,₹ 1050ಕ್ಕೆ ದೊರೆಯುವ ಗ್ಯಾಸ್ ಸಿಲಿಂಡರ್ಗಳನ್ನು ಕೇವಲ ₹ 500ಕ್ಕೆ ನೀಡಲಿದ್ದೇವೆ ಎಂದು ತಿಳಿಸಿದ್ದರು.
ಮುಂದುವರಿದು, ಈ ಯೋಜನೆ ಏಪ್ರಿಲ್ ತಿಂಗಳಿಂದ ಜಾರಿಗೆ ಬರಲಿದ್ದು,ವರ್ಷಕ್ಕೆ 12ಸಿಲಿಂಡರ್ಗಳನ್ನು ನೀಡಲಾಗುವುದು ಎಂದುಹೇಳಿದ್ದರು.
ಇದನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್, ರಾಜಸ್ಥಾನದಲ್ಲಿರುವ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರ ನೀಡುತ್ತಿರುವುದಕ್ಕಿಂತಲೂ ₹500 ಕಡಿಮೆ ಬೆಲೆಗೆ ಸಿಲಿಂಡರ್ ನೀಡುವ ದೊಡ್ಡ ಘೋಷಣೆ ಮಾಡಿದೆ.ಪ್ರಧಾನಿ ನರೇಂದ್ರ ಮೋದಿ ಅವರೇ, 'ಸ್ನೇಹಿತರಿಗೆ' ಡ್ರೈ ಫ್ರೂಟ್ಸ್ ತಿನ್ನಿಸುವುದನ್ನು ನಿಲ್ಲಿಸಿ, ಹಣದುಬ್ಬರದಿಂದ ಬಳಲುತ್ತಿರುವ ಜನರಿಗಾಗಿ ಕೆಲಸಮಾಡಿ ಎಂದು ಕುಟುಕಿದ್ದಾರೆ.
ಇದನ್ನೂ ಓದಿ:₹ 500ಕ್ಕೆ ಅಡುಗೆ ಅನಿಲ ಸಿಲಿಂಡರ್: ಗೆಹಲೋತ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.