ADVERTISEMENT

ಮದ್ಯ ನಿಷೇಧಕ್ಕೆ ಒತ್ತಾಯಿಸಿ ಮದ್ಯದಂಗಡಿಗೆ ಕಲ್ಲೆಸೆದ ಉಮಾಭಾರತಿ

ಪಿಟಿಐ
Published 13 ಮಾರ್ಚ್ 2022, 19:00 IST
Last Updated 13 ಮಾರ್ಚ್ 2022, 19:00 IST
ಉಮಾ ಭಾರತಿ, ಬಿಜೆಪಿ ನಾಯಕಿ
ಉಮಾ ಭಾರತಿ, ಬಿಜೆಪಿ ನಾಯಕಿ   

ಭೋಪಾಲ್: ತಮ್ಮದೇ ಪಕ್ಷದ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಪೂರ್ತಿ ಮಧ್ಯ ನಿಷೇಧಕ್ಕೆ ಒತ್ತಾಯಿಸಿ ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ ಭಾನುವಾರ ಇಲ್ಲಿನ ಆಜಾದ್‌ನಗರದಲ್ಲಿ ಮದ್ಯದಂಗಡಿಯಲ್ಲಿದ್ದ ಮದ್ಯ ಬಾಟಲ್‌ಗಳಿಗೆ ಕಲ್ಲು ತೂರಿದ್ದಾರೆ. ಇನ್ನೊಂದು ವಾರದಲ್ಲಿ ಎಲ್ಲಾ ಮದ್ಯದಂಗಡಿಗಳನ್ನು ಬಂದ್ ಮಾಡಿಸಬೇಕು ಎಂದು ಸ್ಥಳೀಯ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಬೆಂಬಲಿಗರು ಮತ್ತು ಸ್ಥಳೀಯ ನಿವಾಸಿಗಳನ್ನು ಕರೆದೊಯ್ದು, ಮದ್ಯದ ಬಾಟಲಿಗಳನ್ನು ಒಡೆದು ಹಾಕಿರುವ ವಿಡಿಯೊವನ್ನು ಅವರು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, ಅದು ವೈರಲ್ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT