ADVERTISEMENT

Bihar Election Results 2025 LIVE: NDAಗೆ ಭರ್ಜರಿ ಜಯ: 'ಇಂಡಿಯಾ'ಗೆ ಹಿನ್ನಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ನವೆಂಬರ್ 2025, 18:21 IST
Last Updated 14 ನವೆಂಬರ್ 2025, 18:21 IST
<div class="paragraphs"><p>ಬಿಹಾರ ಚುನಾವಣೆ</p></div>

ಬಿಹಾರ ಚುನಾವಣೆ

   

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಅತ್ತ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ ಹಿನ್ನೆಡೆಯಾಗಿದೆ.

ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ರಾಜ್ಯದಲ್ಲಿ ನಡೆದ ಮೊದಲ ಸಾರ್ವತ್ರಿಕ ಚುನಾವಣೆ ಇದಾಗಿದೆ. ಎಸ್‌ಐಆರ್‌ ನಂತರ ಬಿಹಾರದಲ್ಲಿ ಒಟ್ಟು ಮತದಾರರ ಸಂಖ್ಯೆ 7.9 ಕೋಟಿಯಿಂದ 7.4 ಕೋಟಿಗೆ ಇಳಿಕೆಯಾಗಿದೆ.

ನಿತೀಶ್‌ ಕುಮಾರ್ ಆಗಲಿದ್ದಾರೆಯೇ ದಾಖಲೆಯ ಐದನೇ ಬಾರಿಗೆ ಮುಖ್ಯಮಂತ್ರಿ?

ನಿತೀಶ್‌ ಕುಮಾರ್ ಅವರು ದಾಖಲೆಯ ಐದನೇ ಬಾರಿಗೆ ಮುಖ್ಯಮಂತ್ರಿಯಾಗುವರೋ ಅಥವಾ ಬದಲಾವಣೆ ಬಯಸಿರುವ ಜನರು, ನಿತೀಶ್‌ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ‘ಇಂಡಿಯಾ’ ಒಕ್ಕೂಟದ ಕೈಗೆ ಅಧಿಕಾರದ ಚುಕ್ಕಾಣಿ ನೀಡುವರೋ ಎಂಬುದು ಶುಕ್ರವಾರ ನಿಚ್ಚಳವಾಗಲಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ಹಾಗೂ ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಗೆಲುವು ತಮ್ಮದೇ ಎಂಬ ವಿಶ್ವಾಸ ವ್ಯಕ್ತಪಡಿಸಿವೆ. ಭಾರಿ ಪ್ರಮಾಣದಲ್ಲಿ ಮತ ಚಲಾವಣೆ ಆಗಿರುವುದು ತನ್ನ ಉತ್ತಮ ಆಡಳಿತಕ್ಕೆ ಮತ್ತೊಮ್ಮೆ ಜನಾದೇಶ ಸಿಕ್ಕಿರುವುದರ ಸಂಕೇತ ಎಂದು ಆಡಳಿತಾರೂಢ ಎನ್‌ಡಿಎ ಹೇಳುತ್ತಿದೆ.

ADVERTISEMENT

‘ಇಂಡಿಯಾ’ ಕೂಟ ಈ ಮಾತನ್ನು ತಳ್ಳಿಹಾಕುತ್ತಿದೆ. ರಾಜ್ಯದ ಜನರು ಬದಲಾವಣೆ ಬಯಸಿದ್ದಾರೆ. ಜನರ ಈ ಇರಾದೆಯು ದಾಖಲೆಯ ಮತ ಚಲಾವಣೆ ಮೂಲಕ ವ್ಯಕ್ತವಾಗಿದೆ ಎಂದು ‘ಇಂಡಿಯಾ’ ನಾಯಕರು ವಿಶ್ಲೇಷಿಸುತ್ತಿದ್ದಾರೆ.

ಮತಗಟ್ಟೆ ಸಮೀಕ್ಷೆ ಏನು ಹೇಳುತ್ತಿವೆ?

ಎನ್‌ಡಿಎ ಸರಳ ಬಹುಮತ ಪಡೆದು, ಮತ್ತೆ ಅಧಿಕಾರಕ್ಕೇರಲಿದೆ ಎಂದು ಎಲ್ಲ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಇದು ವಿಪಕ್ಷ ಪಾಳಯದಲ್ಲಿ ಕಿರಿಕಿರಿಯನ್ನುಂಟು ಮಾಡಿದೆ. ವಿರೋಧ ಪಕ್ಷಗಳು ಸಮೀಕ್ಷೆಗಳನ್ನು ತಳ್ಳಿಹಾಕಿವೆ. ಚುನಾವಣಾ ತಂತ್ರಗಾರ ಪ್ರಶಾಂತ ಕಿಶೋರ್‌ ನೇತೃತ್ವದ ಜನ ಸುರಾಜ್‌ ಪಕ್ಷದ ಸಾಧನೆ ನಿರಾಶಾದಾಯಕವಾಗಿರಲಿದೆ ಎಂದೂ ಸಮೀಕ್ಷೆಗಳು ಹೇಳಿವೆ.

ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳೇನು?

ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೇರುವ ಪ್ರಯತ್ನದಲ್ಲಿರುವ ಎನ್‌ಡಿಎ ಮೈತ್ರಿಕೂಟವು, ತನ್ನ ಪ್ರಣಾಳಿಕೆಯಲ್ಲಿ ಒಂದು ಕೋಟಿ ಉದ್ಯೋಗ ಸೃಷ್ಟಿ ಮತ್ತು ‘ಲಖ್‌ಪತಿ ದೀದಿ’ ಯೋಜನೆಯಡಿ ಒಂದು ಕೋಟಿ ಮಹಿಳೆಯರಿಗೆ ತರಬೇತಿ ಸೇರಿದಂತೆ ಹಲವು ಭರವಸೆ ನೀಡಿದೆ. ರಾಜ್ಯದ ನಾಲ್ಕು ನಗರಗಳಲ್ಲಿ ಮೆಟ್ರೊ ರೈಲು ಸೇವೆ ಆರಂಭಿಸುವುದು ಮತ್ತು ಏಳು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡುವ ಘೋಷಣೆ ಮಾಡಲಾಗಿದೆ.

ಏಳು ಎಕ್ಸ್‌ಪ್ರೆಸ್‌ವೇಗಳ ನಿರ್ಮಾಣ, 10 ಕೈಗಾರಿಕಾ ಪಾರ್ಕ್‌ಗಳ ಅಭಿವೃದ್ಧಿ, ಬಡ ಕುಟುಂಬಗಳ ಮಕ್ಕಳಿಗೆ ಕೆ.ಜಿಯಿಂದ ಪಿ.ಜಿವರೆಗೆ ಉಚಿತ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಕ್ಕಳಿಗೆ ತಿಂಗಳಿಗೆ ₹2000 ನೆರವು ನೀಡುವುದಾಗಿ ಪ್ರಕಟಿಸಿದೆ.

ಮಹಾಮೈತ್ರಿ ಭರವಸೆ ಮಹಾಪೂರ

ಮಹಾಮೈತ್ರಿಕೂಟ ಸರ್ಕಾರ ರಚನೆಯಾದ 20 ದಿನಗಳಲ್ಲೇ, ರಾಜ್ಯದ ಪ್ರತಿ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲು ಕಾಯ್ದೆ ಅಂಗೀಕರಿಸಲಾಗುವುದು. ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದೆ.

‘ಮಾಯ್-ಬೆಹಿನ್‌ ಮಾನ್’ ಯೋಜನೆಯಡಿ ಡಿಸೆಂಬರ್ 1ರಿಂದ ಮಹಿಳೆಯರು ತಿಂಗಳಿಗೆ ₹2,500 ಮತ್ತು ಮುಂದಿನ ಐದು ವರ್ಷಗಳವರೆಗೆ ವರ್ಷಕ್ಕೆ ₹30,000 ಆರ್ಥಿಕ ಸಹಾಯ ಪಡೆಯಲಿದ್ದಾರೆ. ಬಡವರ ಪ್ರತಿ ಕುಟುಂಬವು 200 ಯೂನಿಟ್ ಉಚಿತ ವಿದ್ಯುತ್ ಪಡೆಯಲಿದೆ. ₹500ಕ್ಕೆ ಅಡುಗೆ ಅನಿಲ ಒದಗಿಸಲಾಗುವುದು. ಎಂದು ಮೈತ್ರಿಕೂಟವು ಭರವಸೆ ನೀಡಿದೆ.

ಪ್ರಣಾಳಿಕೆಯು ಐಟಿ ಪಾರ್ಕ್, ವಿಶೇಷ ಆರ್ಥಿಕ ವಲಯಗಳು (ಎಸ್‌ಇಜೆಡ್‌ಗಳು), ಡೇರಿ ಆಧಾರಿತ ಕೈಗಾರಿಕೆಗಳು, ಐದು ಎಕ್ಸ್‌ಪ್ರೆಸ್‌ವೇಗಳ ನಿರ್ಮಾಣ ಮತ್ತು ಕೃಷಿ ಆಧಾರಿತ ಕೈಗಾರಿಕೆಗಳ ಸ್ಥಾಪನೆ ಸೇರಿದಂತೆ 25 ಅಂಶಗಳನ್ನು ಒಳಗೊಂಡಿದೆ.

ತೀವ್ರ ಪೈಪೋಟಿಗೆ ಸಾಕ್ಷಿಯಾಗಿದ್ದ ಕಣ

ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಹಾಗೂ ‘ಇಂಡಿಯಾ’ ಕೂಟಗಳ ನಡುವೆ ನೇರ ಹಾಗೂ ತುರುಸಿನ ಸ್ಪರ್ಧೆ ಕಂಡುಬಂದಿತ್ತು. ನಿತೀಶ್‌ ಕುಮಾರ್‌ ನೇತೃತ್ವದ ಎನ್‌ಡಿಎಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಎಲ್ಲ ಮತಗಟ್ಟೆ ಸಮೀಕ್ಷೆಗಳು ಹೇಳಿವೆ.

ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್‌ ಮಾತ್ರ ಎಲ್ಲ ಮತಗಟ್ಟೆ ಸಮೀಕ್ಷೆ ಗಳನ್ನು ತಳ್ಳಿಹಾಕಿದ್ದಾರೆ. ‘ಎರಡನೇ ಹಂತದ ಮತದಾನದ ವೇಳೆ, ಜನರು ಮತ ಚಲಾಯಿಸಲು ಇನ್ನೂ ಸರದಿಯಲ್ಲಿ ನಿಂತಿದ್ದರು. ಅದೇ ವೇಳೆ ಮತಗಟ್ಟೆ ಸಮೀಕ್ಷೆಯ ವಿವರಗಳನ್ನು ಬಹಿರಂಗಪಡಿಸಲಾಗಿದೆ’ ಎನ್ನುವ ಮೂಲಕ ತಮ್ಮ ಸಮರ್ಥನೆ ನೀಡುತ್ತಾರೆ.

ಆರ್‌ಜೆಡಿ, ಕಾಂಗ್ರೆಸ್‌, ಸಿಪಿಐ–ಎಂಎಲ್‌,ಸಿಪಿಐ, ಸಿಪಿಎಂ ಹಾಗೂ ವಿಐಪಿ ‘ಇಂಡಿಯಾ’ ಮೈತ್ರಿಕೂಟದ ಅಂಗಪಕ್ಷಗಳು. ಜೆಡಿಯು, ಬಿಜೆಪಿ, ಎಲ್‌ಜೆಪಿ, ಎಚ್‌ಎಂ,ಆರ್‌ಎಲ್‌ಎಂ ಪಕ್ಷಗಳು ಎನ್‌ಡಿಎ ಭಾಗವಾಗಿದೆ.

ರಾಘೋಪುರ, ತಾರಾಪುರದತ್ತ ಎಲ್ಲರ ಚಿತ್ತ

ಬಿಹಾರದಲ್ಲಿ ಯಾರ ಕೈಗೆ ಅಧಿಕಾರದ ಚುಕ್ಕಾಣಿ ಸಿಗಲಿದೆ ಎಂಬ ಕುತೂಹಲಕ್ಕೆ ಶುಕ್ರವಾರ ತೆರೆ ಬೀಳಲಿದೆ. ಅದರೆ, ಎಲ್ಲರ ಚಿತ್ತ ರಾಘೋಪುರ ಹಾಗೂ ತಾರಾಪುರದ ಫಲಿತಾಂಶದತ್ತ ಇರಲಿದೆ.

ಈ ಕ್ಷೇತ್ರಗಳಲ್ಲಿ ಕ್ರಮವಾಗಿ ತೇಜಸ್ವಿ ಯಾದವ್‌ ಹಾಗೂ ಡಿಸಿಎಂ, ಬಿಜೆಪಿಯ ಸಾಮ್ರಾಟ್‌ ಚೌಧರಿ ಸ್ಪರ್ಧಿಸಿರುವುದು ಈ ಕುತೂಹಲಕ್ಕೆ ಕಾರಣ.

ಬೇರೆ ಬೇರೆ ಕಾರಣಗಳಿಂದಾಗಿ, ಪ್ರಸಕ್ತ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಮಾಜಿ ಮುಖ್ಯಮಂತ್ರಿಗಳಾದ ಲಾಲೂ ಪ್ರಸಾದ್‌ ಹಾಗೂ ರಾಬ್ಡಿ ದೇವಿ ಅವರು ಸ್ಪರ್ಧಿಸಿರಲಿಲ್ಲ.

ನಿತೀಶ್‌ ಕುಮಾರ್‌ ಹಾಗೂ ರಾಬ್ಡಿ ದೇವಿ ಅವರು ಈಗಾಗಲೇ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ. ಮೇವು ಹಗರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಲಾಲೂ ಪ್ರಸಾದ್ ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.

ಬಿಹಾರದಲ್ಲಿ ದಾಖಲೆ ಪ್ರಮಾಣದ ಮತದಾನ; ಎಲ್ಲಿಯೂ ಮರು ಮತದಾನ ನಡೆದಿಲ್ಲ

ಮತ ಎಣಿಕಾ ಕೇಂದ್ರಗಳಲ್ಲಿ ಭಾರಿ ಭದ್ರತೆ

ಬಿಹಾರ ಇತಿಹಾಸದಲ್ಲೇ ದಾಖಲೆ ಪ್ರಮಾಣದ ಶೇ 66.91ರಷ್ಟು ಮತದಾನ

ಬಿಹಾರ ವಿಧಾನಸಭೆ ಚುನಾವಣೆಗೆ ಎರಡು ಹಂತಗಳಲ್ಲಿ ನಡೆದ ಮತದಾನಗಳಲ್ಲಿ ಒಟ್ಟಾರೆ ಶೇ 66.91ರಷ್ಟು ಮತದಾನವಾಗಿದೆ. ಇದು ರಾಜ್ಯದ ಚುನಾವಣಾ ಇತಿಹಾಸದಲ್ಲೇ ಅತ್ಯಧಿಕ ಎಂದು ಭಾರತೀಯ ಚುನಾವಣಾ ಆಯೋಗವು (ಇಸಿಐ) ತಿಳಿಸಿದೆ.

ಮೊದಲ ಹಂತದಲ್ಲಿ ಶೇ 65.08 ಹಾಗೂ ಎರಡನೇ ಹಂತದಲ್ಲಿ ಶೇ 68.76ರಷ್ಟು ಮತದಾನವಾಗಿದೆ.

ಅಲ್ಲದೆ ರಾಜ್ಯದ ಇತಿಹಾಸದಲ್ಲಿ ಮಹಿಳಾ ಮತದಾರರು ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸಿದ್ದಾರೆ ಎಂದು ಇಸಿಐ ತಿಳಿಸಿದೆ.

2020ರ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇ 57.29ರಷ್ಟು ಮತದಾನವಾಗಿತ್ತು.

ಈ ಬಾರಿ ಗೆಲುವು ದಾಖಲಿಸಲಿದ್ದೇವೆ ಎಂದು ತೇಜಸ್ವಿ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ. 

ಮೊದಲುಅಂಚೆ ಮತಪತ್ರಗಳ ಎಣಿಕೆ ನಡೆಯುತ್ತಿದ್ದು, ಬಳಿಕ ಇವಿಎಂನಲ್ಲಿನ ಮತ ಎಣಿಕೆ ನಡೆಯಲಿದೆ. 38 ಜಿಲ್ಲೆಗಳ 48 ಕೇಂದ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿದೆ. 

ಆರಂಭಿಕ ಟ್ರೆಂಡ್ ಪ್ರಕಾರ ಎನ್‌ಡಿಎ ಮುನ್ನಡೆಯಲ್ಲಿದ್ದು, ಮಹಾಘಟಬಂಧನ ಮೈತ್ರಿ ಅಲ್ಪ ಹಿನ್ನಡೆಯಲ್ಲಿದೆ. 

ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಬಿಜೆಪಿ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಬೆಳಿಗ್ಗೆ 9 ಗಂಟೆಯ ಟ್ರೆಂಡ್ ಪ್ರಕಾರ ಎನ್‌ಡಿಎ 88 ಹಾಗೂ ಮಹಾಘಟಬಂಧನ 60 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.  

ತಾಜಾ ಟ್ರೆಂಡ್ ಪ್ರಕಾರ ಎನ್‌ಡಿಎ 126 ಹಾಗೂ ಮಹಾಘಟಬಂಧನ 73 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.  

ಚುನಾವಣಾ ಆಯೋಗದ ಫಲಿತಾಂಶ ಮಾಹಿತಿ ನಿಧಾನಗತಿಯ್ಲಿದೆ. 

ಬಂಕಿಪುರದಲ್ಲಿ ಬಿಜೆಪಿಯ ನಿತಿನ್ ನಬಿನ್ 2,043 ಮತಗಳಿಂದ ಮುನ್ನಡೆಯಲ್ಲಿದ್ದಾರೆ...

ಬಿಹಾರ ಚುನಾವಣೆ: 2020ರಲ್ಲಿ ಏನಾಗಿತ್ತು?

ಧನಾಪುರ ಕ್ಷೇತ್ರದಲ್ಲಿ ಆರ್‌ಜೆಡಿಯ ರಿತ್ ಲಾಲ್ ರಾಯ್ ಮುನ್ನಡೆ

ಬಿಹಾರ ಚುನಾವಣೆ: ಮತ ಎಣಿಕೆಯ ಮುಖ್ಯಾಂಶಗಳು

ಎನ್‌ಡಿಎ 159, ಮಹಾಘಟಬಂಧನ 72 ಸ್ಥಾನಗಳಲ್ಲಿ ಮುನ್ನಡೆ

ಭೋಧ್‌ಗಯದಲ್ಲಿ ಎಲ್‌ಜೆಪಿಯ ಶ್ಯಾಮ್‌ದೇವ್ ಪಾಸ್ವಾನ್‌ ಅವರಿಗೆ ಮುನ್ನಡೆ

ಪಟ್ನಾ ಸಾಹೀಬ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಶಶಾಂತ್ ಶೇಖರ್ ಅವರಿಗೆ ಮುನ್ನಡೆ

ಚುನಾವಣಾ ಆಯೋಗದ ಈಗಿನ (ಬೆಳಿಗ್ಗೆ 10 ಗಂಟೆ) ಮಾಹಿತಿ ಪ್ರಕಾರ, ಎನ್‌ಡಿಎ 102 ಹಾಗೂ ಇಂಡಿಯಾ ಮೈತ್ರಿ 33 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಮತಗಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದ ಬಿಹಾರದ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ

ಎನ್‌ಡಿಎಗೆ ಮುನ್ನಡೆ, ಮಹಾಘಟಬಂಧನಗೆ ಹಿನ್ನಡೆ...

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಈಗಿನ ಟ್ರೆಂಡ್ ಪ್ರಕಾರ 160 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಆ ಮೂಲಕ ಮ್ಯಾಜಿಕ್ ಸಂಖ್ಯೆ ಆದ 122 ಅನ್ನು ದಾಟಿ ಬಹುಮತ ಗಳಿಸುವುದು ನಿಚ್ಚಳವೆನಿಸಿದೆ.

ಮತ್ತೊಂದೆಡೆ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ ಮೈತ್ರಿಯು ಹಿನ್ನಡೆಯಲ್ಲಿದ್ದು, 79 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷವು ಎರಡು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

ಬಿಹಾರ ಚುನಾವಣೆ ಫಲಿತಾಂಶ: ಎನ್‌ಡಿಎಗೆ ಸ್ಪಷ್ಟ ಮುನ್ನಡೆ...

ತೇಜಸ್ವಿ ಯಾದವ್‌ಗೆ ಅಲ್ಪ ಮುನ್ನಡೆ

ಇಂಡಿಯಾ ಮೈತ್ರಿಯ ಸಿಎಂ ಅಭ್ಯರ್ಥಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ರಘೋಪುರ ವಿಧಾನಸಭಾ ಕ್ಷೇತ್ರದಿಂದ 893 ಮತಗಳ ಮುನ್ನಡೆಯಲ್ಲಿದ್ದಾರೆ.

ತೇಜಸ್ವಿ ಯಾದವ್ ನಿವಾಸಕ್ಕೆಲಾಲೂ ಪ್ರಸಾದ್ ಆಗಮನ

ಮುನ್ನಡೆ ಕಾಯ್ದುಕೊಂಡ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ವಿಜಯ್ ಕುಮಾರ್ ಸಿನ್ಹಾ

166 ಕ್ಷೇತ್ರಗಳಲ್ಲಿ ಎನ್‌ಡಿಎ ಮುನ್ನಡೆ: ಚುನಾವಣಾ ಆಯೋಗ

ಬಿಜೆಪಿ 72, ಜೆಡಿ(ಯು) 71 ಸೇರಿದಂತೆ ಎನ್‌ಡಿಎ 166 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಮತ್ತೊಂದೆಡೆ ಆರ್‌ಜೆಡಿ 42, ಕಾಂಗ್ರೆಸ್ 8 ಸೇರಿದಂತೆ ಇಂಡಿಯಾ ಮೈತ್ರಿಯು 56 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

ಎನ್‌‍ಡಿಎ 190, ಮಹಾಘಟಬಂಧನ 50 ಸ್ಥಾನಗಳಲ್ಲಿ ಮುನ್ನಡೆ

ಬೆಳಿಗ್ಗೆ 11 ಗಂಟೆಯ ಟ್ರೆಂಡ್ ಪ್ರಕಾರ, ಎನ್‌ಡಿಎ ಮೈತ್ರಿಯು 190 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಭರ್ಜರಿ ಗೆಲುವಿನತ್ತ ದಾಪುಗಾಲು ಇಟ್ಟಿದೆ.

ಅತ್ತ ಮಹಾಘಟಬಂಧನ ಮೈತ್ರಿಯು 50 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮುನ್ನಡೆ ಕಾಯ್ದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕಾ ಖರ್ಗೆ, ಇದು ಈಗಿನ ಟ್ರೆಂಡ್ ಮಾತ್ರ. ಮ್ಯಾಜಿಕ್ ಸಂಖ್ಯೆ ದಾಟುವುದರ ಬಗ್ಗೆ ಯಾವುದೇ ಖಚಿತತೆ ಇಲ್ಲ. ನೋಡೋಣ ಮುಂದೆ ಏನಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 190 ಸ್ಥಾನಗಳನ್ನು ಗೆಲ್ಲುವುದು ಖಚಿತ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಶಾಖಪಟ್ಟಣದಲ್ಲಿ ಹೇಳಿದ್ದಾರೆ.

ರಘೋಪುರ ವಿಧಾನಸಭಾ ಕ್ಷೇತ್ರದಲ್ಲಿ ತೇಜಸ್ವಿ ಯಾದವ್ ಹಿನ್ನಡೆ

ಪಟ್ನಾದಲ್ಲಿ ನಿತೀಶ್ ಕುಮಾರ್ ಬೆಂಬಲಿಗರಿಂದ ಸಂಭ್ರಮಾಚರಣೆ ಆರಂಭ

ಎನ್‌ಡಿಎಗೆ ಭಾರಿ ಬಹುಮತ: ದಿಲೀಪ್ ಜೈಸ್ವಾಲ್

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರಿ ಬಹುಮತದೊಂದಿಗೆ ಗೆಲುವು ದಾಖಲಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಕುಮಾರ್ ಜೈಸ್ವಾರ್ ಹೇಳಿದ್ದಾರೆ.

ಭಾರಿ ಬಹುದತ್ತ ಎನ್‌ಡಿಎ; ಮಹಾಘಟಬಂಧನಕ್ಕೆ ನಿರಾಸೆ

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಈಗಿನ ಟ್ರೆಂಡ್ (12 ಗಂಟೆ) ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ 190ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಬೇಕಾಗಿರುವ ಮ್ಯಾಜಿಕ್ ಸಂಖ್ಯೆ 122.

ಈ ಮ್ಯಾಜಿಕ್ ಸಂಖ್ಯೆಯನ್ನು ಈಗಾಗಲೇ ದಾಟಿರುವ ಬಿಜೆಪಿ ಭಾರಿ ಬಹುಮತದತ್ತ ಮುನ್ನಡೆದಿದೆ.

ಬಿಹಾರದಲ್ಲಿ ಮತ್ತೆ ಎನ್‌ಡಿಎ ಸರ್ಕಾರ ರಚನೆಯಾಗಲಿದ್ದು, ನಿತೀಶ್ ಕುಮಾರ್ ದಾಖಲೆ ಐದನೇ ಬಾರಿ ಸಿಎಂ ಆಗುವ ಸಾಧ್ಯತೆ ಇದೆ. ಪಟ್ನಾ ಸೇರಿದಂತೆ ರಾಜ್ಯದಲ್ಲಿ ಜೆಡಿಯು ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.

ಆರ್‌ಜೆಡಿ ಪೈಪೋಟಿ, ಕಾಂಗ್ರೆಸ್ ಕಳಪೆ ಸಾಧನೆ....

ಅತ್ತ ಮಹಾಘಟಬಂಧನ ಮೈತ್ರಿ ಪಕ್ಷಗಳ ಪೈಕಿ ಆರ್‌ಜೆಡಿ ನಿಕಟ ಪೈಪೋಟಿ ಒಡ್ಡಿದ್ದರೂ ಕಾಂಗ್ರೆಸ್ ಕಳಪೆ ಸಾಧನೆ ಮಾಡಿದೆ.

ಸದ್ಯದ ಮಾಹಿತಿ ಪ್ರಕಾರ ಬಿಜೆಪಿ 84, ಜೆಡಿಯು 76, ಆರ್‌ಜೆಡಿ 43, ಎಲ್‌ಜೆಪಿಆರ್‌ವಿ 22, ಸಿಪಿಐ (ಎಂಎಲ್) (ಎಲ್) 6, ಕಾಂಗ್ರೆಸ್ 5 ಮತ್ತು ಎಚ್‌ಎಎಂಎಸ್ 5 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಗೆಲುವು ಸುನಿಶ್ಚಿತ, ಇದು ಪ್ರತಿಯೊಬ್ಬ ಎನ್‌‌ಡಿಎ ಕಾರ್ಯಕರ್ತನ ಗೆಲುವು, ಬಿಹಾರದ ಗೆಲುವು: ಜೆಡಿಯು ಪ್ರತಿಕ್ರಿಯೆ

ಸ್ಪಷ್ಟ ಬಹುಮತದತ್ತ ಎನ್‌ಡಿಎ

ಬಿಹಾರ ಚುನಾವಣೆಗೆ ಸಂಬಂಧಿಸಿದ ಪ್ರಮುಖ ಸುದ್ದಿಗಳು 

ಬಿಹಾರ ಚುನಾವಣೆಯಲ್ಲಿ ಪಕ್ಷಕ್ಕೆ ಆದ ಹಿನ್ನಡೆಯನ್ನು ಪರಿಶೀಲಿಸಲಾಗುವುದು: ಜನ ಸುರಾಜ್ ಪಕ್ಷದ ವಕ್ತಾರ ಪವನ್ ಕೆ. ವರ್ಮಾ

ಮತ್ತೆ ಮುನ್ನಡೆ ಕಾಯ್ದುಕೊಂಡ ತೇಜಸ್ವಿ...

ರಘೋಪುರ ವಿಧಾನಸಭಾ ಕ್ಷೇತ್ರದಲ್ಲಿ ನಿಕಟ ಪೈಪೋಟಿ: ಬಿಜೆಪಿಯ ಸತೀಶ್ ಕುಮಾರ್ ಅವರಿಂದ ಕೇವಲ 219 ಮತಗಳ ಮುನ್ನಡೆ ಕಾಯ್ದುಕೊಂಡ ತೇಜಸ್ವಿ ಯಾದವ್

ಪಟ್ನಾದಲ್ಲಿ ಬಿಹಾರ ಕಾರ್ಯಕರ್ತರ ಸಂಭ್ರಮ

ಭಾರಿ ಜಯದತ್ತ ಎನ್‌ಡಿಎ; ಬಿಜೆಪಿ ಅತಿ ದೊಡ್ಡ ಪಕ್ಷ

ಬಿಹಾರ ವಿಧಾಸನಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಎನ್‌ಡಿಎ ಮೈತ್ರಿಕೂಟ ಭಾರಿ ಗೆಲುವಿನತ್ತ ಮುನ್ನಡೆದಿದೆ.

ಅಲ್ಲದೆ ರಾಜ್ಯದಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಹಾದಿಯಲ್ಲಿದೆ ಎಂದು ಚುನಾವಣಾ ಆಯೋಗದ ಫಲಿತಾಂಶ ವರದಿಯು ಸೂಚಿಸುತ್ತದೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ 190ಕ್ಕೂ ಅಧಿಕ ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ ಕಾಯ್ದುಕೊಂಡಿದೆ.

2025ರ ಚುನಾವಣೆಯಲ್ಲಿ ಬಿಜೆಪಿ 101 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಈ ಪೈಕಿ 80ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಆ ಮೂಲಕ ಪ್ರಬಲ ರಾಜಕೀಯ ಶಕ್ತಿಯಾಗಿ ತನ್ನ ಬಲ ಪ್ರದರ್ಶನ ಮಾಡಿದೆ.

ದೆಹಲಿ, ಮಹಾರಾಷ್ಟ್ರ, ಹರಿಯಾಣದ ಬಳಿಕವೀಗ ಬಿಹಾರದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ.

ಅತ್ತ ಜೆಡಿಯು 70ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. 2020ರಲ್ಲಿ ಜೆಡಿಯು 43 ಸ್ಥಾನಗಳನ್ನು ಪಡೆದಿತ್ತು.

ಇದರೊಂದಿಗೆ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ನಾಯಕತ್ವಕ್ಕೆ ವ್ಯಾಪಕ ಮನ್ನಣೆ ಸಿಕ್ಕಂತಾಗಿದೆ.

ಮಹಾಘಟಬಂಧನ ಮೈತ್ರಿಯ ಪ್ರಮುಖ ಪಕ್ಷವಾಗಿರುವ ಆರ್‌ಜೆಡಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ 32 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಗಳಿಸುವ ಮೂಲಕ ಕಳಪೆ ಸಾಧನೆ ಮಾಡಿದೆ.

ಕಾಂಗ್ರೆಸ್‌ನ ಸಾಧನೆ ಇದಕ್ಕೂ ಕಳಪೆ ಮಟ್ಟದಲ್ಲಿದೆ. 61 ಸ್ಥಾನಗಳಲ್ಲಿ ಸ್ಪರ್ಧಸಿದ್ದ ಕಾಂಗ್ರೆಸ್, 5ಕ್ಕೂ ಕಡಿಮೆ ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಒಟ್ಟಾರೆಯಾಗಿ ಬಿಹಾರದಲ್ಲಿ ಎನ್‌ಡಿಎ ಸರ್ಕಾರದ ಅಧಿಕಾರ ಮುಂದುವರಿಯುವುದು ನಿಚ್ಚಳವೆನಿಸಿದೆ.

190ಕ್ಕೂ ಅಧಿಕ ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ

200ರ ಗಡಿ ದಾಟಿದ ಎನ್‌ಡಿಎ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಅಭೂತಪೂರ್ವ ಗೆಲುವಿನತ್ತ ದಾಪುಗಾಲು ಇಟ್ಟಿದ್ದು, ಈಗಿನ ಟ್ರೆಂಡ್ (ಮಧ್ಯಾಹ್ನ 1.30) ಪ್ರಕಾರ 201 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.

ಮಹಾಘಟಬಂಧನ ಮೈತ್ರಿಯು 36 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಬಿಹಾರದಲ್ಲೂ ಮತಕಳವು: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಬಿಹಾರದಲ್ಲೂ ಮತಕಳವು ನಡೆದಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಶುಕ್ರವಾರ) ಆರೋಪಿಸಿದ್ದಾರೆ.

ಮಧ್ಯಾಹ್ನ 3 ಗಂಟೆಯ ಟ್ರೆಂಡ್: ಬಿಜೆಪಿ 95, ಜೆಡಿಯು 84 ಸ್ಥಾನಗಳಲ್ಲಿ ಮುನ್ನಡೆ

  • ಬಿಜೆಪಿ: 95

  • ಜೆಡಿಯು: 84

  • ಆರ್‌ಜೆಡಿ: 24

  • ಎಲ್‌ಜೆಪಿಆರ್‌ವಿ: 20

  • ಎಐಎಂಐಎಂ: 6

  • ಎಚ್‌ಎಎಂಎಸ್: 5

  • ಕಾಂಗ್ರೆಸ್: 2

  • ಇತರೆ: 9

(ಮಾಹಿತಿ: ಚುನಾವಣಾ ಆಯೋಗ, ಮಧ್ನಾಹ್ನ 3 ಗಂಟೆ)

ಬಿಹಾರ ಚುನಾವಣೆ: ಪಕ್ಷಗಳ ಸಾಧನೆ (ಮುನ್ನಡೆ)

  • ಬಿಜೆಪಿ: 92

  • ಜೆಡಿಯು: 81

  • ಆರ್‌ಜೆಡಿ: 26

  • ಎಲ್‌ಜೆಪಿಆರ್‌ವಿ: 22

  • ಎಐಎಂಐಎಂ: 5

  • ಎಚ್‌ಎಎಂಎಸ್: 5

  • ಕಾಂಗ್ರೆಸ್: 4

  • ಇತರೆ: 10

(ಮಾಹಿತಿ: ಚುನಾವಣಾ ಆಯೋಗ, ಮಧ್ನಾಹ್ನ 2 ಗಂಟೆ)

7 ಕ್ಷೇತ್ರಗಳಲ್ಲಿ ಎನ್‌ಡಿಎಗೆ ಗೆಲುವು

7 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಘೋಷಣೆಯಾಗಿದೆ. ಜೆಡಿಯುವಿನ ಮೂವರು ಅಭ್ಯರ್ಥಿಗಳು ಮತ್ತು ಬಿಜೆಪಿಯ ಇಬ್ಬರು ಗೆದ್ದಿದ್ದಾರೆ ಎಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ. ಎನ್‌ಡಿಎ 197 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮಹಾಘಟಬಂಧನ್‌ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಬಿಜೆಪಿ ನಾಯಕರ ಹರ್ಷ

ಬಿಹಾರದಲ್ಲಿ ಎನ್‌ಡಿಎ ಐತಿಹಾಸಿಕ ಗೆಲುವು ಸಾಧಿಸಿರುವುದು ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್‌ ಕುಮಾರ್‌ ಸರ್ಕಾರದ ಅಭಿವೃದ್ಧಿ ಮತ್ತು ಕಲ್ಯಾಣ ಯೋಜನೆಗಳ ಮೇಲಿನ ಜನರ ನಂಬಿಕೆಯ ಮುದ್ರೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ.

ಬಿಹಾರದ ಅಭಿವೃದ್ಧಿಗೆ ಎನ್‌ಡಿಎ ಬದ್ಧವಾಗಿದೆ ಎನ್ನುವುದನ್ನು ಅನುಮೋದಿಸಿ ಜನರು ಮುದ್ರೆ ಒತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಎನ್‌ಡಿಎ ಗೆಲುವು: ಬಿಹಾರದ ಜನತೆಗೆ ಪ್ರಧಾನಿ ಮೋದಿ  ಧನ್ಯವಾದ

ಬಿಹಾರದಲ್ಲಿ ಉತ್ತಮ ಆಡಳಿತದ ಗೆಲುವು, ಅಭಿವೃದ್ಧಿಯ ಗೆಲುವು, ಸಾರ್ವಜನಿಕ ಕಲ್ಯಾಣದ ಗೆಲುವು . ಸಾಮಾಜಿಕ ನ್ಯಾಯದ ಗೆಲುವು ಎಂದು ಪ್ರಧಾನಿ ನರೆಂದ್ರ ಮೋದಿ ಹೇಳಿದ್ದಾರೆ.

2025ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಐತಿಹಾಸಿಕ ಮತ್ತು ಅಭೂತಪೂರ್ವ ಗೆಲುವಿನಿಂದ ಆಶೀರ್ವದಿಸಿದ ಬಿಹಾರದ ಕುಟುಂಬ ಸದಸ್ಯರಿಗೆ ನನ್ನ ಹೃತ್ಪೂರ್ವಕ ಧನ್ಯವಾದ. ಈ ಸಾರ್ವಜನಿಕ ತೀರ್ಪು ನಮಗೆ ಜನರಿಗೆ ಸೇವೆ ಸಲ್ಲಿಸಲು ಮತ್ತು ಬಿಹಾರಕ್ಕಾಗಿ ಹೊಸ ಸಂಕಲ್ಪದೊಂದಿಗೆ ಕೆಲಸ ಮಾಡಲು ಶಕ್ತಿ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗಾಯಕಿ ಮೈಥಿಲಿ ಠಾಕೂರ್ ಗೆಲುವು

ಮೈಥಿಲಿ ಠಾಕೂರ್‌

25 ವರ್ಷದ ಗಾಯಕಿ ಮೈಥಿಲಿ ಠಾಕೂರ್‌ 12 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲಿನಗರ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಸಾಮ್ರಾಟ್‌ ಚೌದರಿಗೆ ಗೆಲುವು

ಬಿಹಾರದ ಉಪಮುಖ್ಯಮಂತ್ರಿಯಾಗಿದ್ದ ಸಾಮ್ರಾಟ್‌ ಚೌದರಿ ತಾರಾಪುರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಸಾಮ್ರಾಟ್ 45,843 ಮತಗಳ ಅಂತರದಿಂದ ಗೆದ್ದಿದ್ದಾರೆ.

ಮತ ಎಣಿಕೆ ಮುಕ್ತಾಯ

ಎರಡು ಹಂತಗಳಲ್ಲಿ ನಡೆದಿದ್ದ ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಸದ್ಯ ಅಧಿಕಾರದಲ್ಲಿರುವ ಎನ್‌ಡಿಎ ಮೈತ್ರಿಕೂಟ 202 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿಸುವ ಮೂಲಕ ಅಧಿಕಾರ ಉಳಿಸಿಕೊಂಡಿದೆ. ವಿರೋಧ ಪಕ್ಷಗಳ ಮೈತ್ರಿಕೂಟ 'ಮಹಾಘಟಬಂಧನ'ಕ್ಕೆ ಕೇವಲ 35 ಸ್ಥಾನಗಳಲ್ಲಿ ಜಯ ಒಲಿದಿದೆ. ಉಳಿದ 6 ಕ್ಷೇತ್ರಗಳಲ್ಲಿ ಇತರರು ಗೆದ್ದಿದ್ದಾರೆ.

ಎನ್‌ಡಿಎ ಕೂಟದಲ್ಲಿರುವ ಬಿಜೆಪಿ (89), ಜೆಡಿಯು (85) ಕ್ರಮವಾಗಿ ಅತಿಹೆಚ್ಚು ಸ್ಥಾನಗಳನ್ನು ಪಡೆದ ಪಕ್ಷಗಳಾಗಿವೆ. ಪ್ರಮುಖ ವಿರೋಧ ಪಕ್ಷ ಆರ್‌ಜೆಡಿ, 25 ಸ್ಥಾನಗಳಲ್ಲಿ ಗೆದ್ದಿದೆ. ಕಾಂಗ್ರೆಸ್‌ ಗೆದ್ದಿರುವುದು ಆರು ಕಡೆ ಮಾತ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.