ADVERTISEMENT

ಅನುಚಿತ ವರ್ತನೆ ಸಹಿಸುವುದಿಲ್ಲ: ಪಕ್ಷದ ಕಾರ್ಯಕರ್ತರಿಗೆ ಆರ್‌ಜೆಡಿ ಎಚ್ಚರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ನವೆಂಬರ್ 2020, 15:11 IST
Last Updated 8 ನವೆಂಬರ್ 2020, 15:11 IST
ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌
ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌   

ಪಟ್ನಾ: ಬಿಹಾರದಲ್ಲಿ ಚುನಾವಣಾ ಫಲಿತಾಂಶದ ದಿನದಂದು ನಡೆಯುವ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅನುಚಿತ ವರ್ತನೆಯನ್ನು ಸಹಿಸುವುದಿಲ್ಲವೆಂದು ತನ್ನ ಕಾರ್ಯಕರ್ತರಿಗೆ ಆರ್‌ಜೆಡಿ ಪಕ್ಷವು ಎಚ್ಚರಿಕೆ ನೀಡಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಆರ್‌ಜೆಡಿ, 'ನವೆಂಬರ್‌ 10ರಂದು ಬರಲಿರುವ ಚುನಾವಣಾ ಫಲಿತಾಂಶಗಳು ಏನೇ ಇರಲಿ. ಅದನ್ನು ಕಾರ್ಯಕರ್ತರು ಸಂಪೂರ್ಣ ಸಂಯಮ ಹಾಗೂ ಸೌಜನ್ಯದಿಂದ ಸ್ವೀಕರಿಸಬೇಕು' ಎಂದು ತಾಕೀತು ಮಾಡಿದೆ.

'ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸುವುದು, ಗಾಳಿಯಲ್ಲಿ ಗುಂಡು ಹಾರಿಸಿ ವಿಜಯೋತ್ಸವ ಆಚರಿಸುವುದು ಮತ್ತು ಪ್ರತಿಸ್ಪರ್ಧಿಗಳೊಂದಿಗೆ ಕಾರ್ಯಕರ್ತರು ಅನುಚಿತವಾಗಿ ವರ್ತಿಸುವುದನ್ನು ಸಹಿಸಲಾಗುವುದಿಲ್ಲ' ಎಂದು ಆರ್‌ಜೆಡಿ ಟ್ವೀಟ್‌ ಮಾಡಿದೆ.

ADVERTISEMENT

ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಅವರು ತಮ್ಮ 32ನೇ ಹುಟ್ಟುಹಬ್ಬ ಆಚರಿಸಿಕೊಂಡ ಮರುದಿನ(ನವೆಂಬರ್ 10) ಬಿಹಾರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಮತದಾನೋತ್ತರ ಸಮೀಕ್ಷೆಗಳ ಪ್ರಕಾರ, ಆರ್‌ಜೆಡಿ ನೇತೃತ್ವದ ಮಹಾಘಟಬಂಧನವು ಗೆಲ್ಲುವ ಸಾಧ್ಯತೆ ಹೆಚ್ಚಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.