ADVERTISEMENT

ಹುತಾತ್ಮ ಯೋಧರ ಸಂಬಂಧಿಕರಿಗೆ ಉದ್ಯೋಗ: ಬಿಹಾರ ಸಚಿವ ಸಂಪುಟ ಒಪ್ಪಿಗೆ

ಏಜೆನ್ಸೀಸ್
Published 27 ಜೂನ್ 2020, 5:46 IST
Last Updated 27 ಜೂನ್ 2020, 5:46 IST
ಗಾಲ್ವನ್ ವ್ಯಾಲಿಯಲ್ಲಿ ಸೇನೆ ನಿಯೋಜನೆ
ಗಾಲ್ವನ್ ವ್ಯಾಲಿಯಲ್ಲಿ ಸೇನೆ ನಿಯೋಜನೆ   

ಪಟ್ನಾ: ಗಾಲ್ವನ್ ಕಣಿವೆ ಸಂಘರ್ಷದಲ್ಲಿ ಹುತಾತ್ಮರಾದ ರಾಜ್ಯದ ಸೈನಿಕರ ಕುಟುಂಬದವರಿಗೆ ಉದ್ಯೋಗ ನೀಡುವ ಪ್ರಸ್ತಾವಕ್ಕೆ ಬಿಹಾರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಪೂರ್ವ ಲಡಾಖ್‌ನ ಗಾಲ್ವನ್‌ ಕಣಿವೆ ಪ್ರದೇಶದಲ್ಲಿ ಜೂನ್‌ 15ರ ರಾತ್ರಿ ಭಾರತ ಹಾಗೂ ಚೀನಾ ಸೇನೆಗಳ ನಡುವೆ ಹಿಂಸಾತ್ಮಕ ಸಂಘರ್ಷ ನಡೆದಿತ್ತು. ಈ ವೇಳೆ ದೇಶದ 20 ಯೋಧರು ಹುತಾತ್ಮರಾಗಿದ್ದರು.

ಸಂಘರ್ಷದ ಸಂದರ್ಭ ಚೀನಾ ಕಡೆಯಲ್ಲಿ ಸುಮಾರು 43 ಸಾವು–ನೋವು ಸಂಭವಿಸಿದೆ ಎಂದು ವರದಿಯಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.