ADVERTISEMENT

ಕನ್ಹಯ್ಯಾ ಕುಮಾರ್ ಬೆಂಗಾವಲು ವಾಹನದ ಮೇಲೆ ಮತ್ತೆ ಕಲ್ಲು ತೂರಾಟ 

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2020, 14:43 IST
Last Updated 5 ಫೆಬ್ರುವರಿ 2020, 14:43 IST
   

ಪಾಟ್ನಾ (ಬಿಹಾರ): ಸಿಪಿಐ ನಾಯಕ ಕನ್ಹಯ್ಯಾ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ಬುಧವಾರ ಕಲ್ಲು ತೂರಾಟ ನಡೆಸಿದ್ದಾರೆ. ನಾಲ್ಕು ದಿನಗಳಲ್ಲಿ ಅವರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ.

ಬಿಹಾರದ ಸುಪಾಲ್‌ ಜಿಲ್ಲೆಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಅವರು, ಸಹಾರ್ಸ ಕಡೆಗೆ ತೆರಳುತ್ತಿದ್ದಾಗ ದಾಳಿ ನಡೆದಿದೆ. ಸ್ಥಳೀಯ ಮಾರುಕಟ್ಟೆಯ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಅವರ ವಾಹನ ಜಖಂ ಆಗಿದೆ.

ಘಟನೆಯಲ್ಲಿ ಕನ್ಹಯ್ಯಾ ಕುಮಾರ್‌ ಅವರಿಗೆ ಗಾಯಗಳಾಗಿವೆ ಎಂದು ಎಎನ್‌ಐ ವರದಿ ಮಾಡಿದೆ.

ADVERTISEMENT

ನಾಲ್ಕು ದಿನಗಳ ಹಿಂದೆ ಚಾಪ್ರಾ–ಸಿವಾನ್‌ ಮಾರ್ಗದಕೋಪಾ ಬಜಾರ್‌ ಬಳಿ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.