ADVERTISEMENT

ಬಿಲ್ಕಿಸ್ ಬಾನು ಪ್ರಕರಣ: ಅಪರಾಧಿಗಳ ಬಿಡುಗಡೆ ಆದೇಶ ಅಸಿಂಧುಗೊಳಿಸಲು ಸಿಜೆಐಗೆ ಪತ್ರ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2022, 1:58 IST
Last Updated 28 ಆಗಸ್ಟ್ 2022, 1:58 IST
   

ನವದೆಹಲಿ: ಗುಜರಾತ್‌ನಲ್ಲಿ 2002ರಲ್ಲಿ ನಡೆದ ಬಿಲ್ಕಿಸ್‌ ಬಾನು ಮೇಲಿನ ಅತ್ಯಾಚಾರ ಮತ್ತು 14 ಜನರ ಹತ್ಯೆ ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್‌ ಸರ್ಕಾರದ ಆದೇಶವನ್ನು ಅಸಿಂಧುಗೊಳಿಸುವಂತೆ ಕೋರಿ 134 ನಿವೃತ್ತ ಅಧಿಕಾರಿಗಳು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್‌ ಅವರಿಗೆ ಪತ್ರ ಬರೆದಿದ್ದಾರೆ.

11 ಅಪರಾಧಿಗಳನ್ನು ಬಿಡುಗಡೆಗೊಳಿಸಲು ಆದೇಶಿಸಿರುವ ಗುಜರಾತ್‌ ಸರ್ಕಾರ ಹಲವು ಲೋಪಗಳನ್ನು ಎಸಗಿದೆ ಎಂದು ‘ಕಾನ್‌ಸ್ಟಿಟ್ಯೂಷನಲ್‌ ಕಂಡಕ್ಟ್‌ ಗ್ರೂಪ್‌’ (ಸಿಸಿಜಿ) ಏಳು ಪುಟಗಳ ಮನವಿಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT