ADVERTISEMENT

Bilkis Bano: ಶರಣಾಗಲು ಸಮಯ ಕೇಳಿದ ಅಪರಾಧಿಗಳ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಜನವರಿ 2024, 10:32 IST
Last Updated 19 ಜನವರಿ 2024, 10:32 IST
<div class="paragraphs"><p>ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳು ಗುಜರಾತ್ ಸರ್ಕಾರದ ಆದೇಶದಂತೆ 2022ರ ಆಗಸ್ಟ್‌ 15ರಂದು ಗೋಧ್ರಾ ಜೈಲಿನಿಂದ ಬಿಡುಗಡೆಯಾದಾಗ..</p></div>

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳು ಗುಜರಾತ್ ಸರ್ಕಾರದ ಆದೇಶದಂತೆ 2022ರ ಆಗಸ್ಟ್‌ 15ರಂದು ಗೋಧ್ರಾ ಜೈಲಿನಿಂದ ಬಿಡುಗಡೆಯಾದಾಗ..

   

ಪಿಟಿಐ ಚಿತ್ರ

ನವದೆಹಲಿ: ಬಿಲ್ಕಿಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಅಪರಾಧಿಗಳು, ಪೊಲೀಸರಿಗೆ ಶರಣಾಗಲು ನೀಡಲಾಗಿರುವ ಸಮಯಾವಕಾಶವನ್ನು ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ADVERTISEMENT

ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್‌ ಭುಯಾನ್‌ ಅವರಿದ್ದ ಪೀಠ, ವಿನಾಯಿತಿ ಪಡೆಯುವ ಯಾವ ಅರ್ಹತೆಯೂ ಅಪರಾಧಿಗಳಿಗೆ ಇಲ್ಲ ಎಂದು ಅಭಿಪ್ರಾಯಪಟ್ಟಿದೆ.

2002ರಲ್ಲಿ ಗೋಧ್ರಾ ರೈಲು ದುರಂತದ ಬಳಿಕ ಗುಜರಾತ್‌ನಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಸುರಕ್ಷಿತ ಜಾಗಕ್ಕೆ ತೆರಳುತ್ತಿದ್ದ ಬಿಲ್ಕಿಸ್‌ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಅವರ ಮೂರು ವರ್ಷದ ಮಗಳೂ ಸೇರಿದಂತೆ, ಕುಟುಂಬದ 7 ಮಂದಿಯನ್ನು ಹತ್ಯೆ ಮಾಡಲಾಗಿತ್ತು. ಆಗ 21 ವರ್ಷದವರಾಗಿದ್ದ ಬಾನು, ಐದು ತಿಂಗಳ ಗರ್ಭಿಣಿಯೂ ಆಗಿದ್ದರು.

ಈ ಪ್ರಕರಣದ 11 ಅಪರಾಧಿಗಳಿಗೆ 2008ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಆದರೆ, ಗುಜರಾತ್ ಸರ್ಕಾರದ ಆದೇಶದ ಮೇರೆಗೆ ಎಲ್ಲ ಅಪರಾಧಿಗಳು 2022ರ ಆಗಸ್ಟ್‌ 15ರಂದು ಜೈಲಿನಿಂದ ಬಿಡುಗಡೆಯಾಗಿದ್ದರು.

ಅಪರಾಧಿಗಳಿಗೆ ಕ್ಷಮಾದಾನ ನೀಡುವ ಪ್ರಕ್ರಿಯೆಯಲ್ಲಿ ಗುಜರಾತ್ ಸರ್ಕಾರವು ತನ್ನ ವಿವೇಚನಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಜನವರಿ 8ರಂದು ಚಾಟಿ ಬೀಸಿದ್ದ ಸುಪ್ರೀಂ ಕೋರ್ಟ್, ಅಪರಾಧಿಗಳು ಮುಂದಿನ 2 ವಾರದೊಳಗೆ ಜೈಲಿಗೆ ಹಿಂದಿರಗಬೇಕು ಎಂದು ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.